Wednesday, October 17, 2012

ನಂಬುಗೆ

ನಂಬುವುದು ಆದಿಯೊಳು ಪರಮ ಚೇತನ ವಿಭುವ
ಲೋಕವನು ಸೃಷ್ಟಿಸಿದ ಪರದೈವವ

ತಾನು ತಾನಲ್ಲದಿಹ ತಾನೇ ತಾನಾಗಿರುವ
ತನಗೆ ಮಿಗಿಲಿಲ್ಲದಿಹ ಅಧಿದೈವವ

ಎಲ್ಲವನೂ ಒಳಗೊಂಡ ಎಲ್ಲದರ ಹಿಡಿವಡೆದ
ಎಲ್ಲದಕೂ ಮಿಗಿಲಾದ ಚೈತನ್ಯವ

ತಿರುತಿರುಗಿದಾ ಬುಗರಿ ತಿರುಗೆ ತಿರೆಗುರುಳಿದರೆ
ತಿರಿದುದನು ತೆರೆದೀವ ವೈಚಿತ್ರ್ಯವ

ಎಲ್ಲದಕೂ ಎತ್ತರದ ಆದಿಅಂತ್ಯಗಳಿರದ
ಎಲ್ಲರೊಳು ನೆಲೆಸಿರುವ ಆನಂದವ

ರೂಪಗಳ ಮೀರಿರುವ ರೂಪಿನೊಳೇ
ಮೈದೋರ್ವ ಕಾಲದೇಶಗಳಿರದ ಬ್ರಹ್ಮಾಂಡವ

ಬೇಡಿಕೊಳಲಿಂದಿಲ್ಲ ನೂರು ವರಗಳ ಕೃಪೆಯ
ಮೂರುಮೂರರೊಳು ಕಾಣ್ಗೆ ದಿಟದರಿವನು

No comments:

Post a Comment

ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ

ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ ಬ್ರಿಟಿಷರಿಂದ ಆರಂಭಗೊಂಡಿತೇ ಹೊರತು ಕೇವಲ ಜಾತಿ ವ್ಯವಸ್ಥೆಯಿಂದ ಸೃಷ್ಟಿಯಾಯಿತೆನ್ನುವುದು ಪೆರಮೆ. ದಮನಕಾರಿ ಬ್ರಿಟಿಷ್ ಆಡಳಿತ ನೀತಿಗಳು...