ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ಕವಿದಿರುವ ಗಾಢತೆಯ
ಅಲ್ಲಿರುವ ಗೂಢತೆಯ
ನೀಗಿಸುವ ಬೆಳಕನ್ನು ನೀನಿತ್ತೆಯೈ
ಒಂದರೊಳಗೆರಡನ್ನು
ಎರಡರೊಳಗೊಂದನ್ನು
ಸೇರಿಸುತ ಸೃಷ್ಟಿಯನು ನೀ ಗೆಯ್ದೆಯೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
ಅನಿತರೊಳಗೊಂದನ್ನು
ಅನಿಬರೊಳಗೋರ್ವನನು
ತೋರಿಸುತ್ತ ಮಾಯೆಯನು ನೀ ತೊಡೆದೆಯೈ
ದೂರವಾಗಿದ್ದುದರ ಇರವನ್ನು ತಿಳಿಯಿಸುತ್ತ
ಮಾಯೆಯನು ನೀಗಿಸುತ್ತ ನೀ ಪೊರೆದೆಯೈ
ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
Tuesday, August 13, 2013
Subscribe to:
Post Comments (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment