ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ಕವಿದಿರುವ ಗಾಢತೆಯ
ಅಲ್ಲಿರುವ ಗೂಢತೆಯ
ನೀಗಿಸುವ ಬೆಳಕನ್ನು ನೀನಿತ್ತೆಯೈ
ಒಂದರೊಳಗೆರಡನ್ನು
ಎರಡರೊಳಗೊಂದನ್ನು
ಸೇರಿಸುತ ಸೃಷ್ಟಿಯನು ನೀ ಗೆಯ್ದೆಯೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
ಅನಿತರೊಳಗೊಂದನ್ನು
ಅನಿಬರೊಳಗೋರ್ವನನು
ತೋರಿಸುತ್ತ ಮಾಯೆಯನು ನೀ ತೊಡೆದೆಯೈ
ದೂರವಾಗಿದ್ದುದರ ಇರವನ್ನು ತಿಳಿಯಿಸುತ್ತ
ಮಾಯೆಯನು ನೀಗಿಸುತ್ತ ನೀ ಪೊರೆದೆಯೈ
ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
Tuesday, August 13, 2013
Subscribe to:
Post Comments (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment