ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ಕವಿದಿರುವ ಗಾಢತೆಯ
ಅಲ್ಲಿರುವ ಗೂಢತೆಯ
ನೀಗಿಸುವ ಬೆಳಕನ್ನು ನೀನಿತ್ತೆಯೈ
ಒಂದರೊಳಗೆರಡನ್ನು
ಎರಡರೊಳಗೊಂದನ್ನು
ಸೇರಿಸುತ ಸೃಷ್ಟಿಯನು ನೀ ಗೆಯ್ದೆಯೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
ಅನಿತರೊಳಗೊಂದನ್ನು
ಅನಿಬರೊಳಗೋರ್ವನನು
ತೋರಿಸುತ್ತ ಮಾಯೆಯನು ನೀ ತೊಡೆದೆಯೈ
ದೂರವಾಗಿದ್ದುದರ ಇರವನ್ನು ತಿಳಿಯಿಸುತ್ತ
ಮಾಯೆಯನು ನೀಗಿಸುತ್ತ ನೀ ಪೊರೆದೆಯೈ
ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
Tuesday, August 13, 2013
Subscribe to:
Post Comments (Atom)
ಜಾತಿಗಣತಿಯ ಆ60 ಪ್ರಶ್ನೆಗಳು
ಜಾತಿಗಣತಿಯ ಆ 60 ಪ್ರಶ್ನೆಗಳು ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ಪ್ರಸ್ತುತ (ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ...

-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment