ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ಕವಿದಿರುವ ಗಾಢತೆಯ
ಅಲ್ಲಿರುವ ಗೂಢತೆಯ
ನೀಗಿಸುವ ಬೆಳಕನ್ನು ನೀನಿತ್ತೆಯೈ
ಒಂದರೊಳಗೆರಡನ್ನು
ಎರಡರೊಳಗೊಂದನ್ನು
ಸೇರಿಸುತ ಸೃಷ್ಟಿಯನು ನೀ ಗೆಯ್ದೆಯೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
ಅನಿತರೊಳಗೊಂದನ್ನು
ಅನಿಬರೊಳಗೋರ್ವನನು
ತೋರಿಸುತ್ತ ಮಾಯೆಯನು ನೀ ತೊಡೆದೆಯೈ
ದೂರವಾಗಿದ್ದುದರ ಇರವನ್ನು ತಿಳಿಯಿಸುತ್ತ
ಮಾಯೆಯನು ನೀಗಿಸುತ್ತ ನೀ ಪೊರೆದೆಯೈ
ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ
ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ
Tuesday, August 13, 2013
Subscribe to:
Post Comments (Atom)
The Hidden Reality of Worship: Christianity, Islam, and the Indic Matrix
Vigraha–Ārādhana and the Indic Civilizational Matrix Introduction Debates about “idol worship” have long been used in religious polemics i...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
No comments:
Post a Comment