Tuesday, August 13, 2013

ಅಂತರಾತ್ಮ

ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ

ಕವಿದಿರುವ ಗಾಢತೆಯ
ಅಲ್ಲಿರುವ ಗೂಢತೆಯ
ನೀಗಿಸುವ ಬೆಳಕನ್ನು ನೀನಿತ್ತೆಯೈ

ಒಂದರೊಳಗೆರಡನ್ನು
ಎರಡರೊಳಗೊಂದನ್ನು
ಸೇರಿಸುತ ಸೃಷ್ಟಿಯನು ನೀ ಗೆಯ್ದೆಯೈ

ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ

ಅನಿತರೊಳಗೊಂದನ್ನು
ಅನಿಬರೊಳಗೋರ್ವನನು
ತೋರಿಸುತ್ತ ಮಾಯೆಯನು ನೀ ತೊಡೆದೆಯೈ

ದೂರವಾಗಿದ್ದುದರ ಇರವನ್ನು ತಿಳಿಯಿಸುತ್ತ
ಮಾಯೆಯನು ನೀಗಿಸುತ್ತ ನೀ ಪೊರೆದೆಯೈ

ನೀನಲ್ಲವೇ ಎನಗೆ ಸ್ಫೂರ್ತಿಗಳನಿತ್ತವನು
ನೀನಿರುವೀ ಲೋಕಕ್ಕೆ ಋಣಿಯಾದೆನೈ
ನೀನಲ್ಲವೇ ಎನ್ನ ಬಾಳ್ವೆ ಬೆಳಗಿದ ಗುರುವು
ನಿನ್ನ ದಯೆಯಿಂದಲಿ ಸುಖಿಯಾದೆನೈ

ನೀನಲ್ಲವೇ ಎನ್ನ ನಲವು ನಲಿವಿನ ಚಿಲುಮೆ
ಎನ್ನ ಬಾಳ್ವೆಯನಿಂದು ಸೊಗಯಿಸಿದೆಯೈ
ನಿನದೊಂದು ಒಲುಮೆಯಲಿ ಎಲ್ಲವ ಗೆಲ್ಲುವ ಛಲವ
ಎನಗಿತ್ತು ಕೈ ಹಿಡಿದು ನಡೆಯಿಸಿದೆಯೈ

No comments:

Post a Comment

ಜಾತಿಗಣತಿಯ ಆ60 ಪ್ರಶ್ನೆಗಳು

ಜಾತಿಗಣತಿಯ ಆ 60 ಪ್ರಶ್ನೆಗಳು  ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ಪ್ರಸ್ತುತ (ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ...