ಮಳೆ
ಎಡೆಬಿಡದೆ ಸುರಿಯುವ ಮಳೆಗೆ
ಕೊಚ್ಚಿಹೋದುವು ಹಲವೂ
ಕೊಚ್ಚೆಯೊಳು ಅರಳೀತೇ ಕೆಂಪನೆಯ ತಾವರೆ
ಕೊನೆಯಿರದ ಸುರಿತದ ನಡುವೆ
ಕೊನೆಗಂಡಿತಂದು ಮಳೆಯೂ
ಇನ್ನೊಮ್ಮೆ ಬಾರದೇ ಆಷಾಢ ಮಾಸ
ಸುಡುವ ಬೇಗೆಯ ಬಿಸಿಗೆ
ಒಣಗಿ ಮರ-ಗಂಟಿಗಳು
ಇನ್ನೊಮ್ಮೆ ಕೊನರುವುದೇ ಕನಲಿರುವ ಕೊಂಬೆ
ತನ್ನದಿರೆ ತನ್ನದೆಂದೂ
ಅನ್ಯವಿರೆ ಪರವೆಂದೂ
ಅನ್ಯವನ್ನೊ ಳಗೊಂಡೀತೇ ಮುರುಟಿರುವ ಮಾನಸ
Monday, August 26, 2013
Subscribe to:
Post Comments (Atom)
ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ
ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ ಬ್ರಿಟಿಷರಿಂದ ಆರಂಭಗೊಂಡಿತೇ ಹೊರತು ಕೇವಲ ಜಾತಿ ವ್ಯವಸ್ಥೆಯಿಂದ ಸೃಷ್ಟಿಯಾಯಿತೆನ್ನುವುದು ಪೆರಮೆ. ದಮನಕಾರಿ ಬ್ರಿಟಿಷ್ ಆಡಳಿತ ನೀತಿಗಳು...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment