ಬಿಟ್ಟುಬಿಡು ಈಗೆನ್ನ ಎನ್ನ ಭಾವಸಮಾಧಿಯೊಳು
ಮಂದ್ರ ಸ್ಥಾಯಿಯಲೀಗ ಹಾಡಿಕೊಳಲೇ?
ಆರ ಭಜಿಸಲಿ ಈ ಗಾಢ ತಿಮಿರದೊಳು
ಮನದ ಕದವನು ಈಗ ಮುಚ್ಚಿಕೊಳಲೇ?
ಬಿಟ್ಟುಬಿಡು ಈಗೆನ್ನ ದೈತ್ಯ ತೆರೆಗಳ ನಡುವೆ
ರೇತ ಸಮುದ್ರದಲೀಗ ತೇಲಿಕೊಳಲೇ?
ಅತ್ತು ಬಳಲಿದ ಕಣ್ಣ ಹನಿ ಬತ್ತಿಹೋಗಿರಲು
ಕ್ಷುದ್ರ ರೆಪ್ಪೆಯನೊಮ್ಮೆ ಮುಚ್ಚಿಕೊಳಲೇ?
ಕಂಡ ಕನಸುಗಳೆಲ್ಲ ವಿಚ್ಛಿದ್ರವಾಗಿರಲು
ಎದೆಯ ಬಯಕೆಯನೀಗ ಬಿಚ್ಚಿಕೊಳಲೇ?
ಎಲ್ಲ ಕೊನೆಗೊಳುವ ಮುನ್ನ ಮನವೀಗ ಬೇಡುತಿದೆ
ಎನ್ನ ಕರ್ಕಶ ಸ್ವರದಿಂದೊಮ್ಮೆ ಹಾಡಿಕೊಳಲೇ?
[soundcloud url="https://api.soundcloud.com/tracks/86459760" width="100%" height="166" iframe="true" /]
Subscribe to:
Post Comments (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment