ಬಿಟ್ಟುಬಿಡು ಈಗೆನ್ನ ಎನ್ನ ಭಾವಸಮಾಧಿಯೊಳು
ಮಂದ್ರ ಸ್ಥಾಯಿಯಲೀಗ ಹಾಡಿಕೊಳಲೇ?
ಆರ ಭಜಿಸಲಿ ಈ ಗಾಢ ತಿಮಿರದೊಳು
ಮನದ ಕದವನು ಈಗ ಮುಚ್ಚಿಕೊಳಲೇ?
ಬಿಟ್ಟುಬಿಡು ಈಗೆನ್ನ ದೈತ್ಯ ತೆರೆಗಳ ನಡುವೆ
ರೇತ ಸಮುದ್ರದಲೀಗ ತೇಲಿಕೊಳಲೇ?
ಅತ್ತು ಬಳಲಿದ ಕಣ್ಣ ಹನಿ ಬತ್ತಿಹೋಗಿರಲು
ಕ್ಷುದ್ರ ರೆಪ್ಪೆಯನೊಮ್ಮೆ ಮುಚ್ಚಿಕೊಳಲೇ?
ಕಂಡ ಕನಸುಗಳೆಲ್ಲ ವಿಚ್ಛಿದ್ರವಾಗಿರಲು
ಎದೆಯ ಬಯಕೆಯನೀಗ ಬಿಚ್ಚಿಕೊಳಲೇ?
ಎಲ್ಲ ಕೊನೆಗೊಳುವ ಮುನ್ನ ಮನವೀಗ ಬೇಡುತಿದೆ
ಎನ್ನ ಕರ್ಕಶ ಸ್ವರದಿಂದೊಮ್ಮೆ ಹಾಡಿಕೊಳಲೇ?
[soundcloud url="https://api.soundcloud.com/tracks/86459760" width="100%" height="166" iframe="true" /]
Subscribe to:
Post Comments (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment