ಜೀವವಾಹ
ಹಗಲಿರುಳು ಎಡೆಬಿಡದೆ
ನನ್ನೊಳಗೆ ನನ್ನಂತೆ
ಹರಿವ ಜೀವದ ವಾಹ ನೀನಲ್ಲವೇ
ಮಣ್ಣ ಕಣ-ಕಣದಿಂದ
ಸ್ಫುರಣಗೊಳೆ ಭವವಾಗಿ
ಅರಳ್ವ ಜೀವದ ವಾಹ ನೀನಲ್ಲವೇ
ಅಳವಿರದಾ ಕಾಶದಿಂದ
ಹರಿವ ಬಲ್ಝರಿಯಂತೆ
ಸುರಿವ ಜೀವದ ವಾಹ ನೀನಲ್ಲವೇ
ಕಡಲಿನಾಳದ ಬಸಿರ
ರತ್ನಗರ್ಭವ ಸೀಳಿ
ಹುಟ್ಟನೀಯುವ ವಾಹ ನೀನಲ್ಲವೇ
ಚಣಚಣವೂ ಉಸಿರಾಗಿ
ಹರಿದು ಒಳಹೊಳೆಯಾಗಿ
ನೆತ್ತರೊಡಲಿನ ವಾಹ ನೀನಲ್ಲವೇ
Monday, August 26, 2013
Subscribe to:
Post Comments (Atom)
ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ
ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ ಬ್ರಿಟಿಷರಿಂದ ಆರಂಭಗೊಂಡಿತೇ ಹೊರತು ಕೇವಲ ಜಾತಿ ವ್ಯವಸ್ಥೆಯಿಂದ ಸೃಷ್ಟಿಯಾಯಿತೆನ್ನುವುದು ಪೆರಮೆ. ದಮನಕಾರಿ ಬ್ರಿಟಿಷ್ ಆಡಳಿತ ನೀತಿಗಳು...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment