ವ್ರಣ
ನಿನ್ನನರಿತೆನು ಎಂದು
ತಿಳಿದಿದ್ದೆ ನಾನಂದು
ನಮ್ಮ ದೇಹಗಳ ನಾವರಿತುಕೊಂಡ ಹಾಗೆ
ಒಂದು ಸ್ಪರ್ಶದಲಿ ಒಂದಂಗ ಮಿಡಿವಂತೆ
ಇನ್ನೊಂದು ಸ್ಪರ್ಶದಲಿ ನೋವನೀವಂತೆ
ಎಲ್ಲಾ ತಿಳಿದಂತೆ ಭ್ರಮೆಗೊಂಡಿದ್ದೆ ನಾನು
ಭ್ರಮೆ ಕಳಚಿತೊಂದು ದಿನ
ತಿಳಿಯಲಾರದೆ ಹೋದೆ
ನನ್ನ ದೇಹವನೇ ನಾನರಿಯಲಿಲ್ಲ
ಮೇಲುಹರಿವಿನ ಮಂಜು
ನಿಜದಲ್ಲಿ ಹಿರಿದೆಂದು
ಮಂಜುಗುಡ್ಡೆಯ ಗಾತ್ರಾ ನಾನರಿಯಲಿಲ್ಲ
ಹೊರಗೆ ಕಾಣುವ ಪೊರೆಯ
ಒಳಗನರಿಯದೆ ಹೋದೆ
ಒಳಗೆ ಬೆಳೆದಿದ್ದ ವ್ರಣಾ ನಾನರಿಯಲಿಲ್ಲ
ಮಂಜುಗುಡ್ಡೆ = iceberg
Monday, August 26, 2013
Subscribe to:
Post Comments (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment