ವ್ರಣ
ನಿನ್ನನರಿತೆನು ಎಂದು
ತಿಳಿದಿದ್ದೆ ನಾನಂದು
ನಮ್ಮ ದೇಹಗಳ ನಾವರಿತುಕೊಂಡ ಹಾಗೆ
ಒಂದು ಸ್ಪರ್ಶದಲಿ ಒಂದಂಗ ಮಿಡಿವಂತೆ
ಇನ್ನೊಂದು ಸ್ಪರ್ಶದಲಿ ನೋವನೀವಂತೆ
ಎಲ್ಲಾ ತಿಳಿದಂತೆ ಭ್ರಮೆಗೊಂಡಿದ್ದೆ ನಾನು
ಭ್ರಮೆ ಕಳಚಿತೊಂದು ದಿನ
ತಿಳಿಯಲಾರದೆ ಹೋದೆ
ನನ್ನ ದೇಹವನೇ ನಾನರಿಯಲಿಲ್ಲ
ಮೇಲುಹರಿವಿನ ಮಂಜು
ನಿಜದಲ್ಲಿ ಹಿರಿದೆಂದು
ಮಂಜುಗುಡ್ಡೆಯ ಗಾತ್ರಾ ನಾನರಿಯಲಿಲ್ಲ
ಹೊರಗೆ ಕಾಣುವ ಪೊರೆಯ
ಒಳಗನರಿಯದೆ ಹೋದೆ
ಒಳಗೆ ಬೆಳೆದಿದ್ದ ವ್ರಣಾ ನಾನರಿಯಲಿಲ್ಲ
ಮಂಜುಗುಡ್ಡೆ = iceberg
Monday, August 26, 2013
Subscribe to:
Post Comments (Atom)
ಜಾತಿಗಣತಿಯ ಆ60 ಪ್ರಶ್ನೆಗಳು
ಜಾತಿಗಣತಿಯ ಆ 60 ಪ್ರಶ್ನೆಗಳು ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ಪ್ರಸ್ತುತ (ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ...

-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment