ಮರೆತೊಂದು ನೆನಪನ್ನು ಮೀಂಟಿ ಮೀಂಟುತ ಮತ್ತೆ
ಕೇಳಲು ಇಂಪಾದ ನಾದವಾಗಿಸು
ಇರದಿದ್ದ ಕನಸುಗಳ ತೋರಿ ತೋರುತ ಮತ್ತೆ
ಇರುಳಿನ ನಶೆಯೊಳಗೆ ತೇಲಿತೇಲಿಸು
ಅವಿತಿಟ್ಟ ಭಾವಗಳ ಹೇಳಿರದ ಗುಟ್ಟುಗಳ
ಒಮ್ಮೆ ತೆರೆದು ತೋರಿಸುತ್ತ ನಿರಾಳವಾಗಿಸು
ಬಂಧದೊಳು ಸಿಲುಕಿದ ಶೂನ್ಯವಾದ ಮನಸ್ಸಿಗೆ
ದಿಕ್ಕುಗಳ ತೋರಿಸುತ್ತ ವಿಷಾದವ ನೀಗಿಸು || ೧||
ಕವಿದಿರುಳಲಿ ತುಂಬು ಬೆಳದಿಂಗಳ
ಮೊಗೆ ಮೊಗೆದೀಯುತ ಬೊಗಸೆಯಲಿ
ಇರದೊಂದು ಕನಸನ್ನು ಇರಗೊಡುತಲಿ ಮತ್ತೆ
ರಾಗಗಳಲೆಯೊಳು ತೇಲಿತೇಲಿಸು || ೨ ||
[soundcloud url="https://api.soundcloud.com/tracks/69280433" width="100%" height="166" iframe="true" /]
Subscribe to:
Post Comments (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
ಸರ್ ನಿಮ್ಮ ಕವನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೋ ತಿಳಿಯುತ್ತಿಲ್ಲ ಆದರೆ ಒಂದು ಮಾತು ಕೇಳ್ತೇನೆ ಇಂತಹ ಅಸಾಮಾನ್ಯ ಕವನ ಕನ್ನಡ ಕವನದಲ್ಲಿ ಪೋಸ್ಟ್ ಮಾಡುವ ಮೂಲಕ ಕನ್ನಡ ಕವನ ಗ್ರೂಪನ್ನು ಅತಿ ಎತ್ತರದಲ್ಲಿ ನಿಲ್ಲಿಸಿದ್ದೀರಿ ಅನಂತಾನಂತ ಧನ್ಯವಾದಗಳು ನಿಮಗೆ
ReplyDeleteನಿಮ್ಮ ಪ್ರೀತಿಗಾಗಿ ಕೃತಜ್ಞತೆಗಳು, ಜಯರಾಮ್.
ReplyDelete