Tuesday, August 13, 2013

ತಾಳ್ಮೆ

ನೀನೊಮ್ಮೆ ಉಲಿಯುವ ತನಕ
ಕಾಯುತ್ತ ಕಾವೆನು ನಾನು
ಎದೆಯ ಗೂಡಿನ ತುಂಬ ಕಾತರವ ತುಂಬಿ

ಇರುಳು ಕಳೆಯುವವರೆಗೆ
ಇರುಳಿನೊಲು ಕಾವೆನು ನಾನು
ಬೆಳಗ್ಗಿನಾ ಬೆಳಕಿನ ಬರವ ತಾಳ್ಮೆಯಲಿ ತಾಳ್ದು

ಬೆಳಗು ಬೆಳಗಲೇ ಬೇಕು
ಇರುಳು ಮಾಸಲೇ ಬೇಕು
ನಿನ್ನಿನಿದಾದ ಮಾತುಗಳ ಹೊಳೆ ಹರಿಯಬೇಕು

ಇನಿದಾದ ಮಾತಿನ ಒಳಗೆ
ಕೇಳರಿಯದಾ ಗಾನ
ಆಕಾಶ ಗೋಪುರವ ಛೇದಿಸಲೇ ಬೇಕು

ಎನ್ನೆದೆಯ ಗೂಡಿನೊಳಿರುವ
ಹಕ್ಕಿಗಳ ಚಿಲಿಪಿಲಿಯಿಂದ
ಗಾನಕ್ಕೆ ಮೇಳವನು ಕೂಡಿಸಲೇ ಬೇಕು

ಆ ಗಾನಮೇಳದಿಂದೆ
ಹೂವುಗಳು ತಾವು ಅರಳಿ
ಇಳೆಯ ಹೂದೋಟಗಳ ವ್ಯಾಪಿಸಲೇ ಬೇಕು

ನೀನೊಮ್ಮೆ ಉಲಿಯುವ ತನಕ
ಕಾಯುತ್ತ ಕಾವೆನು ನಾನು
ಎದೆಯ ಗೂಡಿನ ತುಂಬ ಕಾತರವ ತುಂಬಿ

 

[soundcloud url="https://api.soundcloud.com/tracks/85846689" width="100%" height="166" iframe="true" /]

 

 

No comments:

Post a Comment

ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ

ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...