ನೀನೊಮ್ಮೆ ಉಲಿಯುವ ತನಕ
ಕಾಯುತ್ತ ಕಾವೆನು ನಾನು
ಎದೆಯ ಗೂಡಿನ ತುಂಬ ಕಾತರವ ತುಂಬಿ
ಇರುಳು ಕಳೆಯುವವರೆಗೆ
ಇರುಳಿನೊಲು ಕಾವೆನು ನಾನು
ಬೆಳಗ್ಗಿನಾ ಬೆಳಕಿನ ಬರವ ತಾಳ್ಮೆಯಲಿ ತಾಳ್ದು
ಬೆಳಗು ಬೆಳಗಲೇ ಬೇಕು
ಇರುಳು ಮಾಸಲೇ ಬೇಕು
ನಿನ್ನಿನಿದಾದ ಮಾತುಗಳ ಹೊಳೆ ಹರಿಯಬೇಕು
ಇನಿದಾದ ಮಾತಿನ ಒಳಗೆ
ಕೇಳರಿಯದಾ ಗಾನ
ಆಕಾಶ ಗೋಪುರವ ಛೇದಿಸಲೇ ಬೇಕು
ಎನ್ನೆದೆಯ ಗೂಡಿನೊಳಿರುವ
ಹಕ್ಕಿಗಳ ಚಿಲಿಪಿಲಿಯಿಂದ
ಗಾನಕ್ಕೆ ಮೇಳವನು ಕೂಡಿಸಲೇ ಬೇಕು
ಆ ಗಾನಮೇಳದಿಂದೆ
ಹೂವುಗಳು ತಾವು ಅರಳಿ
ಇಳೆಯ ಹೂದೋಟಗಳ ವ್ಯಾಪಿಸಲೇ ಬೇಕು
ನೀನೊಮ್ಮೆ ಉಲಿಯುವ ತನಕ
ಕಾಯುತ್ತ ಕಾವೆನು ನಾನು
ಎದೆಯ ಗೂಡಿನ ತುಂಬ ಕಾತರವ ತುಂಬಿ
[soundcloud url="https://api.soundcloud.com/tracks/85846689" width="100%" height="166" iframe="true" /]
Tuesday, August 13, 2013
Subscribe to:
Post Comments (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment