Tuesday, August 13, 2013

ತಾಳ್ಮೆ

ನೀನೊಮ್ಮೆ ಉಲಿಯುವ ತನಕ
ಕಾಯುತ್ತ ಕಾವೆನು ನಾನು
ಎದೆಯ ಗೂಡಿನ ತುಂಬ ಕಾತರವ ತುಂಬಿ

ಇರುಳು ಕಳೆಯುವವರೆಗೆ
ಇರುಳಿನೊಲು ಕಾವೆನು ನಾನು
ಬೆಳಗ್ಗಿನಾ ಬೆಳಕಿನ ಬರವ ತಾಳ್ಮೆಯಲಿ ತಾಳ್ದು

ಬೆಳಗು ಬೆಳಗಲೇ ಬೇಕು
ಇರುಳು ಮಾಸಲೇ ಬೇಕು
ನಿನ್ನಿನಿದಾದ ಮಾತುಗಳ ಹೊಳೆ ಹರಿಯಬೇಕು

ಇನಿದಾದ ಮಾತಿನ ಒಳಗೆ
ಕೇಳರಿಯದಾ ಗಾನ
ಆಕಾಶ ಗೋಪುರವ ಛೇದಿಸಲೇ ಬೇಕು

ಎನ್ನೆದೆಯ ಗೂಡಿನೊಳಿರುವ
ಹಕ್ಕಿಗಳ ಚಿಲಿಪಿಲಿಯಿಂದ
ಗಾನಕ್ಕೆ ಮೇಳವನು ಕೂಡಿಸಲೇ ಬೇಕು

ಆ ಗಾನಮೇಳದಿಂದೆ
ಹೂವುಗಳು ತಾವು ಅರಳಿ
ಇಳೆಯ ಹೂದೋಟಗಳ ವ್ಯಾಪಿಸಲೇ ಬೇಕು

ನೀನೊಮ್ಮೆ ಉಲಿಯುವ ತನಕ
ಕಾಯುತ್ತ ಕಾವೆನು ನಾನು
ಎದೆಯ ಗೂಡಿನ ತುಂಬ ಕಾತರವ ತುಂಬಿ

 

[soundcloud url="https://api.soundcloud.com/tracks/85846689" width="100%" height="166" iframe="true" /]

 

 

No comments:

Post a Comment

ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ

ಜಮೀನ್ದಾರಿ ಪದ್ಧತಿ ಮತ್ತು ಶೋಷಣೆ ಬ್ರಿಟಿಷರಿಂದ ಆರಂಭಗೊಂಡಿತೇ ಹೊರತು ಕೇವಲ ಜಾತಿ ವ್ಯವಸ್ಥೆಯಿಂದ ಸೃಷ್ಟಿಯಾಯಿತೆನ್ನುವುದು ಪೆರಮೆ. ದಮನಕಾರಿ ಬ್ರಿಟಿಷ್ ಆಡಳಿತ ನೀತಿಗಳು...