ತಿರುಗಿನೋಡಿದ ಮೋರೆ ಮರೆಯಾಗಿ ಹೋಯ್ತೇಕೆ
ತಿರುಗೆ ತಿರುತಿರುಗಿ ನೋಡದೇಕೆ
ಕಂಡು ಕಾಣದ ಚೆಲುವು ಕೇಳಿ ಕೇಳದ ಇನಿಪು
ತನ್ನ ಮೆಯ್ಯ ಮಾಟವನ್ನು ತೋರದೇಕೆ
ಕನಲಿ ಮಸಿಯಾಗುವ ಮುನ್ನ ಬರೆದಿಟ್ಟ ಓಲೆಗಳು
ತಂತಮ್ಮ ಗಮ್ಯಗಳ ಸೇರವೇಕೆ
ಕೊನೆಯ ಕೊಳ್ಳುವನ್ನಕ ಇಡಿದಿಡಿವ ಚಾಣಗಳು
ಅರೆಯಿಂದ ರೂಪೊಂದ ಕಡೆಯವೇಕೆ
ಮತ್ತೆ ಒರೆಯುವ ಮುನ್ನ ತಡವರಿಸಿ ಮಾತುಗಳು
ಪಿಸಿಯುತ್ತ ತಾವ್ತಾವೇ ಉಲಿಯವೇಕೆ
ಮತ್ತೆ ಕರೆಯುವ ಮುನ್ನ ಕರೆದಿದ್ದ ಧ್ವನಿಗಳು
ತಂತಮ್ಮ ಜಾಡುಗಳ ತೋರವೇಕೆ
Subscribe to:
Post Comments (Atom)
ಜಾತಿಗಣತಿಯ ಆ60 ಪ್ರಶ್ನೆಗಳು
ಜಾತಿಗಣತಿಯ ಆ 60 ಪ್ರಶ್ನೆಗಳು ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ಪ್ರಸ್ತುತ (ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ...

-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment