ವೈಷ್ಣವ ಬಂಧುವೆಂದವನನ್ನೇ ಕರೆವರು
ಪರರ ದುಃಖಗಳನ್ನರಿತವನ
ದುರ್ಬಲರಿಗೆ ಉಪಕರಿಸುವನವನು
ಮನದೊಳು ಅಭಿಮಾನವ ತಾಳದೆಯೇ
ಎಲ್ಲವರೊಡ ಸಹನೆಯಿಂದೇಗುತ್ತ
ಯಾರನ್ನೂ ತೆಗಳದೆ ಜೀವಿಸುವ
ನಡೆನುಡಿಯಿಂ ಸಮಚಿತ್ತನವನು
ಆ ವೈಷ್ಣವನವ್ವೆಯೋ ಧನ್ಯೆಯಲ
ನೇರದೃಷ್ಟಿಯವ ದಾಹವ ತೊರೆದವ
ಪರಸ್ತ್ರೀಯರು ಮಾತೆಯರೆಂಬವ
ನಾಲಗೆಯಿಂದ ಅಸತ್ಯವ ನುಡಿಯನು
ಪರಸ್ವತ್ತುಗಳನ್ನುಣದಿರುವವನು
ಮೋಹಮಾಯೆಯೊಳು ಮುಳುಗಿರದವನು
ದೃಢವೈರಾಗ್ಯವ ತಾಳ್ದವನು
ರಾಮನಾಮವೇ ಅಮೃತವು ಅವನಿಗೆ
ಧಾಮಂಗಳೆಲ್ಲವ ಜಾನಿಸಿರೆ
ದುರಾಶೆಯ ತಾಳನು ಕಪಟರಹಿತನು
ಕಾಮಕ್ರೋಧಂಗಳ ಗೆಲಿದವನು
ಕುಲವ ಉದ್ಧರಿಸುವನವನನ್ನೇ ಕಾದಿಹೆ
ದೀನ ನರಸಯ್ಯ ನಾನು ದರುಶನಕೆ
ಮೂಲಸಾಹಿತ್ಯ - ನರಸಿಂಹ ಮೆಹತಾ, ವೈಷ್ಣವ ಜನತೋ ತೇನೇ ಕಹಿಯೇ.
[soundcloud url="https://api.soundcloud.com/tracks/84957815" width="100%" height="166" iframe="true" /]
Subscribe to:
Post Comments (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
No comments:
Post a Comment