ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಮೂಡಬಾಂದಳದೆ ತೇರನ್ನೇರಿದ ಆದಿತ್ಯದೇವನ ಸಂಗದೆ |
ಓಡೆ ಓಟವನ್ನು ಮಾಡೆ ಮಾಟವನ್ನು ಹೂಡೆ ಹೂಟವನ್ನು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಜವ್ವನವ ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮುಪ್ಪು ಬಾರದೊಲರಳಿಸು ||
ಕೞೆದುಹೋಗಿಹ ದಿನಗಳೆಲ್ಲದರ ಆನಂದವ ಕೊಡು ಹಿಂದಕ್ಕೆ |
ಕಾಣುತ್ತಿದ್ದರೂ ಕೈಗೆ ಎಟಕದ ಕನಸನ್ನೂ ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಪಡುವ ಬಾಂದಳದೆ ತೇಲುತ್ತಿಪ್ಪ ಆ ತುಂಬುತಿಂಗಳ ಚಂದದೆ |
ಸುರಿಯುತ್ತಿದ್ದರೂ ಮೆಯ್ಗೆ ಸೋಕದ ಬೆಳ್ವೊನಲನ್ನು ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಭೂತಕಾಲದ ಭವಿತನಿಧಿಗಳ ಕಳೆದುಹೋದ ಕೀಲಿಗೊಂಚಲನ್ನು |
ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ದಯೆಯಿರಲಿ ||
[soundcloud url="https://api.soundcloud.com/tracks/86460112" width="100%" height="166" iframe="true" /]
Subscribe to:
Post Comments (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
ತುಂಬಾ ದಿನಗಳ ನಂತರ ಒಂದು ಸುಂದರ ನವೋದಯ ಕಾವ್ಯ ಓದಿದ ಅನುಭವ ನನಗೆ ಆಯಿತು. ತಮ್ಮ ದಯೆಯಿಂದ ನಾನು ಒಮ್ಮೆ ಬಾಲ್ಯಕ್ಕೆ ಹಿಂದಿರುಗಿ ಬಂದೆ...
ReplyDeletemy blog:
www.badari-poems.blogspot.com
ನಿಮ್ಮ ಪ್ರೀತಿಗಾಗಿ ಕೃತಜ್ಞತೆಗಳು, ಬದರಿನಾಥ ಅವರೇ. ನಿಮ್ಮ ಕವನಗಳೂ ಚೆನ್ನಾಗಿವೆ.
ReplyDelete