ಅನುಭವ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
ಜನಿಮರಣಂಗಳಲ್ಲೂ ಇಹಪರಂಗಳಲ್ಲೂ (೨)
ಬಿಡದಲೆ ಕಾಯುತ್ತ ದಾರಿಗಾಣಿಸಿದೆ
ಹೊಸತನು ಅರಿತಾಗ ಹಳತನು ತೊರೆದಾಗ
ಅಪರವೆಂಬುದು ಕಾಣೆ ನಿನ್ನ ಸೃಷ್ಟಿಯೊಳಗೆ
ನಿನ್ನನು ಅರಿತಾಗ ಮುಚ್ಚಿದ್ದು ತೆರೆದಾಗ
ನೀನೇ ನೀನಿದ್ದುದ ಕಂಡೆ ನಿನ್ನ ಸೃಷ್ಟುಯೊಳಾಗೆ
ಬರಿದೊಂದು ಸ್ಪರ್ಶದ ಮೋಹಕ ಮಾಯೆಯಲಿ
ಅರಿಯದ ತೀರದೊಳು ಎನ್ನ ತಂದು ಕೂರಿಸಿದೆ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
Wednesday, February 19, 2014
Thursday, January 16, 2014
ಬಂದೇ ಬರುವುದು
ಬಂದೇ ಬರುವುದದೊಂದು ದಿನ ಭೂಮಿಯೊಳು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ತೇಲುದೋಣಿ
ತೇಲುದೋಣಿಯ ತೆರದೆ ತೇಲುತೇಲುತ ಸಾಗಿ
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
Subscribe to:
Posts (Atom)
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ
ಸಂಸ್ಕೃತ ಕೃತಕ ಭಾಷೆ ಎನ್ನುವವರ ಗಮನಕ್ಕೆ "ವ್ಯಾಕರಣ ಬದ್ಧವಾಗಿ ರಚನೆ ಮಾಡಿರುವುದೇ ಸಂಸ್ಕೃತ ಕೃತಕ ಭಾಷೆ ಎನ್ನುವುದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯಿಕ ಭಾಷೆಯೂ ಕೃತಕ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...