ಬಂದೇ ಬರುವುದದೊಂದು ದಿನ ಭೂಮಿಯೊಳು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
Thursday, January 16, 2014
ತೇಲುದೋಣಿ
ತೇಲುದೋಣಿಯ ತೆರದೆ ತೇಲುತೇಲುತ ಸಾಗಿ
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
Subscribe to:
Comments (Atom)
The Hidden Reality of Worship: Christianity, Islam, and the Indic Matrix
Vigraha–Ārādhana and the Indic Civilizational Matrix Introduction Debates about “idol worship” have long been used in religious polemics i...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...