ಬಂದೇ ಬರುವುದದೊಂದು ದಿನ ಭೂಮಿಯೊಳು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
Thursday, January 16, 2014
ತೇಲುದೋಣಿ
ತೇಲುದೋಣಿಯ ತೆರದೆ ತೇಲುತೇಲುತ ಸಾಗಿ
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
Subscribe to:
Posts (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...