ಬಂದೇ ಬರುವುದದೊಂದು ದಿನ ಭೂಮಿಯೊಳು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
Thursday, January 16, 2014
ತೇಲುದೋಣಿ
ತೇಲುದೋಣಿಯ ತೆರದೆ ತೇಲುತೇಲುತ ಸಾಗಿ
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
Subscribe to:
Posts (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...