ವ್ಯಕ್ತಗಳಲ್ಲಿ ಅವ್ಯಕ್ತವಾದ, ಜೀವಗಳಲ್ಲಿ ಜೀವವಾಗಿ ನೆಲೆಸಿರುವ ಪರಮ ಚೈತನ್ಯವನ್ನಾರಾಧಿಸಲಿಕ್ಕೆ ಒದಗಬಲ್ಲ ಉಪಾಸನೆಗಳಲ್ಲಿ ಪ್ರಮುಖವಾದ ನಾದೋಪಾಸನೆ ಮೋಕ್ಷ ಸಾಧನೆಗಿರುವ ಸಾಧನವೆನ್ನಲಾಗಿದೆ. ಭಾರತೀಯ ಪರಂಪರೆಯಲ್ಲಿ ನಾದವನ್ನು ದೈವತ್ವದ ಅಭಿವ್ಯಕ್ತಿಯೆಂದು ಗ್ರಹಿಸಲಾಗಿದೆ. ಶಾರ್ಙ್ಗದೇವನ ಸಂಗೀತರತ್ನಾಕರದಲ್ಲಿ “ಸಮಸ್ತ ಬ್ರಹ್ಮಾಂಡವನ್ನು ವ್ಯಾಪಿಸಿರುವ, ನಿತ್ಯವೂ ಆನಂದವನ್ನು ಕೊಡಬಲ್ಲ, ಜೀವಕಾರಕವಾದ ನಾದಬ್ರಹ್ಮವನ್ನು ಪೂಜಿಸುವುದಾಗಲಿ” ಎನ್ನಲಾಗಿದೆ. ಭವ್ಯವಾದ ಈ ಆಶಯವನ್ನು ವಾಗ್ಗೇಯಕಾರರಾದ ತ್ಯಾಗರಾಜ ಸ್ವಾಮಿಗಳು ಬಲವಾಗಿ ಪ್ರತಿಪಾದಿಸಿದರು. ತ್ಯಾಗರಾಜ ಸ್ವಾಮಿಗಳು “ರಾಗಸುಧಾರಸ ಪಾನಮು ಜೇಸಿ ರಾಜಿಲ್ಲವೇ ಓ ಮನಸಾ” ಎಂದು ಸಾರಿದ್ದಾರೆ. “ರಾಗವೆಂಬ ಅಮೃತವನ್ನು ಕುಡಿದು ಆನಂದಿಸು, ಯಾಕೆಂದರೆ ಇದು ಸಕಲ ಸಂಪದಗಳನ್ನೂ ಕೊಡಬಲ್ಲುದು. ಸದಾಶಿವ ಸ್ವರೂಪವಾದ ಓಂಕಾರವನ್ನು ತಿಳಿದವರು ಜೀವನ್ಮುಕ್ತರಾಗುತ್ತಾರೆ” ಎಂಬುದು ಈ ಕೃತಿಯ ಸಾರ. ಇಲ್ಲಿ ರಾಗವೆಂಬುದು ನಾದ ಮತ್ತು ನಾದಬ್ರಹ್ಮ ಎಂಬುದು ಸಂಗೀತ ರೂಪದ ಪರಬ್ರಹ್ಮವೇ ಆಗಿದೆ. ಇದು ವ್ಯಕ್ತಿಗಳಿಗೆ ಸಲ್ಲುವ ಅಭಿಧಾನವಲ್ಲ.
Saturday, August 17, 2024
Subscribe to:
Posts (Atom)
ಜಾತಿಗಣತಿಯ ಆ60 ಪ್ರಶ್ನೆಗಳು
ಜಾತಿಗಣತಿಯ ಆ 60 ಪ್ರಶ್ನೆಗಳು ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ಪ್ರಸ್ತುತ (ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ...

-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
\\ ಹಿಂದೂ ಮುಸ್ಲಿಮರು ಈ ದೇಶದಲ್ಲಿ ಜೊತೆಯಾಗಿ ಬದುಕಿರುವುದಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಹಿಂದುಗಳು ಮುಸ್ಲಿಮರ ವೈರಿಗಳೂ ಅಲ್ಲ ಮುಸ್ಲಿಮರು ಹಿಂದುಗಳ ವೈರಿಗಳೂ ಅಲ...
-
ಮುಸ್ಲಿಂ ಎನ್ನುವುದು ಒಂದೇ ಜಾತಿಯಲ್ಲ. ಜಾತಿಗಣತಿಯಲ್ಲಿ ಮುಸ್ಲಿಂ ಒಂದೇ ಜಾತಿಯೆಂದು ನಮೂದಾಗಿದ್ದರೆ ಗಣತಿಯಲ್ಲಿ ಅನುಸರಿಸಿದ ಮಾನದಂಡಗಳು ತಪ್ಪಾಗಿವೆ. ಒಟ್ಟು ಇಪ್ಪತ್ತೇಳ...