ವ್ಯಕ್ತಗಳಲ್ಲಿ ಅವ್ಯಕ್ತವಾದ, ಜೀವಗಳಲ್ಲಿ ಜೀವವಾಗಿ ನೆಲೆಸಿರುವ ಪರಮ ಚೈತನ್ಯವನ್ನಾರಾಧಿಸಲಿಕ್ಕೆ ಒದಗಬಲ್ಲ ಉಪಾಸನೆಗಳಲ್ಲಿ ಪ್ರಮುಖವಾದ ನಾದೋಪಾಸನೆ ಮೋಕ್ಷ ಸಾಧನೆಗಿರುವ ಸಾಧನವೆನ್ನಲಾಗಿದೆ. ಭಾರತೀಯ ಪರಂಪರೆಯಲ್ಲಿ ನಾದವನ್ನು ದೈವತ್ವದ ಅಭಿವ್ಯಕ್ತಿಯೆಂದು ಗ್ರಹಿಸಲಾಗಿದೆ. ಶಾರ್ಙ್ಗದೇವನ ಸಂಗೀತರತ್ನಾಕರದಲ್ಲಿ “ಸಮಸ್ತ ಬ್ರಹ್ಮಾಂಡವನ್ನು ವ್ಯಾಪಿಸಿರುವ, ನಿತ್ಯವೂ ಆನಂದವನ್ನು ಕೊಡಬಲ್ಲ, ಜೀವಕಾರಕವಾದ ನಾದಬ್ರಹ್ಮವನ್ನು ಪೂಜಿಸುವುದಾಗಲಿ” ಎನ್ನಲಾಗಿದೆ. ಭವ್ಯವಾದ ಈ ಆಶಯವನ್ನು ವಾಗ್ಗೇಯಕಾರರಾದ ತ್ಯಾಗರಾಜ ಸ್ವಾಮಿಗಳು ಬಲವಾಗಿ ಪ್ರತಿಪಾದಿಸಿದರು. ತ್ಯಾಗರಾಜ ಸ್ವಾಮಿಗಳು “ರಾಗಸುಧಾರಸ ಪಾನಮು ಜೇಸಿ ರಾಜಿಲ್ಲವೇ ಓ ಮನಸಾ” ಎಂದು ಸಾರಿದ್ದಾರೆ. “ರಾಗವೆಂಬ ಅಮೃತವನ್ನು ಕುಡಿದು ಆನಂದಿಸು, ಯಾಕೆಂದರೆ ಇದು ಸಕಲ ಸಂಪದಗಳನ್ನೂ ಕೊಡಬಲ್ಲುದು. ಸದಾಶಿವ ಸ್ವರೂಪವಾದ ಓಂಕಾರವನ್ನು ತಿಳಿದವರು ಜೀವನ್ಮುಕ್ತರಾಗುತ್ತಾರೆ” ಎಂಬುದು ಈ ಕೃತಿಯ ಸಾರ. ಇಲ್ಲಿ ರಾಗವೆಂಬುದು ನಾದ ಮತ್ತು ನಾದಬ್ರಹ್ಮ ಎಂಬುದು ಸಂಗೀತ ರೂಪದ ಪರಬ್ರಹ್ಮವೇ ಆಗಿದೆ. ಇದು ವ್ಯಕ್ತಿಗಳಿಗೆ ಸಲ್ಲುವ ಅಭಿಧಾನವಲ್ಲ.
Saturday, August 17, 2024
Subscribe to:
Post Comments (Atom)
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ
ಹದಿನಾಲ್ಕು ವರ್ಷಗಳ ಹಿಂದಿನ 'ಪ್ರಣಯ' ಕವಿತೆ ಈಗ ಸಣ್ಣ ಬದಲಾವಣೆಗಳೊಂದಿಗೆ "ಕನ್ನಡ ಮೀಡಿಯಂ ಕಾಸರಗೋಡು" ಯೂಟ್ಯೂಬ್ ಚಾನೆಲಿನಲ್ಲಿ ನಾಲ್ಕು ಭಾಷೆಗಳಲ್...
-
ರಮಣ ಮಹರ್ಷಿಗಳು ಅದ್ವೈತ ವೇದಾಂತದ ಸಾರವನ್ನು ಬಹಿರಂಗಪಡಿಸಿದ ರೀತಿ ಅನ್ಯಾದೃಶವಾದುದು. ರಮಣ ಮಹರ್ಷಿಗಳ "ಏಕಾಣ್ಮ ಪಂಚಕಂ" ಐದು ಚರಣಗಳಿಂದ ಕೂಡಿದ ಸ್ತೋತ್ರ. ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
No comments:
Post a Comment