Wednesday, October 30, 2024

ಸಂತ ಬದರುದ್ದಿನ್ - ಬದರಿನಾಥ

 ಶಬರಿಮಲೆಯಲ್ಲಿ ವಾವರ ಸ್ವಾಮಿ ಇರುವಂತೆ ಬದರಿನಾಥದಲ್ಲಿ ಅದೇ ಸ್ಥಾನ ಸಂತ ಬದರುದ್ದಿನ್ ಅವರಿಗೆ ಇದೆ ಎಂದು ತಿಳಿಯಬಹುದು. ವಾವರ ಸ್ವಾಮಿ ನಿಜವಾಗಿ ಅಯ್ಯಪ್ಪನ ಭಕ್ತನಾಗಿದ್ದನೆಂಬುದು ಭಕ್ತರ ಅಂಬೋಣ. ಆದರೆ ಇಂದು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುವ ಪ್ರತಿಯೊಬ್ಬರು ವಾವರ ಸ್ವಾಮಿಯ ಭೇಟಿ ಮಾಡದಿದ್ದರೆ ಅಯ್ಯಪ್ಪನ ದರ್ಶನ ಸಂಪೂರ್ಣವಲ್ಲ ಎಂದು ತಿಳಿಯುತ್ತಾರೆ. ಭಕ್ತನಾಗಿದ್ದ ವಾವರ ಸ್ವಾಮಿಯ ಭೇಟಿ ಮಾಡಿ ಕಾಣಿಕೆ ಕೊಡುವುದರಲ್ಲಿ ತಪ್ಪಿಲ್ಲ. ಆದರೆ ಮುಸಲ್ಮಾನ ವಾವರನ ಭೇಟಿಗಾಗಿ ಕಾಣಿಕೆ ಕೊಡುವ ಅಥವಾ ಅಲ್ಲಿ ದೊರಕುವ ಭಸ್ಮ ಸ್ವೀಕರಿಸುವ ಅಗತ್ಯವಿಲ್ಲವೆಂದು ತೋರುತ್ತದೆ. ಭಸ್ಮಧಾರಿಯಾದ ಅಯ್ಯಪ್ಪ ಭಕ್ತನನ್ನು ಮುಸ್ಲಿಂ ಎಂದು ಪರಿಗಣಿಸುವ ಅಗತ್ಯವಿಲ್ಲ ಮತ್ತು ಈ ಬಗೆಯ ಕಾಣಿಕೆಗಳನ್ನು ಸ್ವೀಕರಿಸುವುದು ಅವರ ಆಚಾರದ ಪ್ರಕಾರ ಶಿರ್ಕ್ ಎನಿಸಿಕೊಳ್ಳುತ್ತದೆ. ಹೀಗಾಗಿ ನಿಜವಾಗಿ ಅವರ ಮತಾನುಸರಣೆಗೆ ಅದರ ಅಗತ್ಯವಿಲ್ಲ.  

ಬದರಿನಾಥದಲ್ಲಿ ಇಂದಿಗೆ ಇರುವ ಅವಧಿ ಭಾಷೆಯ ಆರತಿ ಶ್ಲೋಕವನ್ನು ಬರೆದವರು ಸಂತ ಬದರುದ್ದಿನ್ ಎನ್ನಲಾಗುತ್ತದೆ. ಆದ ಸಂತ ಬದರುದ್ದಿನ್ ಎಂಬವರು ಭಸ್ಮಧಾರಿಯಾದ ಶಿವಭಕ್ತನೆಂದು ಅಲ್ಲಿಯೇ ಹೇಳಲಾಗುತ್ತದೆ. ಭಸ್ಮಧಾರಿಯಾದ ಶಿವಭಕ್ತನನ್ನು ಮುಸಲ್ಮಾನನನ್ನು ಮುಸ್ಲಿಂ ಎಂದು ಪರಿಗಣಿಸುವ ಅಗತ್ಯವಿಲ್ಲ. ಸಂತ ಬದರುದ್ದಿನ್ ಕಥೆಯಲ್ಲ, ನಿಜವಾಗಿ ಇದ್ದವರೆಂದು ಪರಿಗಣಿಸಿದರೂ ಶಿವಭಕ್ತನಾದ ಬದರುದ್ದಿನ್ ಅವರಿಗೆ ದರ್ಗಾ ಇರುವುದಿಲ್ಲ ಎಂದು ತಿಳಿಯಬೇಕು. 

ಇನ್ನು ಸೂಫಿ ಬದರುದ್ದಿನ್ ದರ್ಗಾ (ಬಾಘ್‍ಪತ್) ಎನ್ನಲಾಗುವ ಪ್ರದೇಶವೂ ಸಹ ಆಕ್ರಮಣ ಮಾಡಿಕೊಂಡ ಸ್ಥಳವೆಂಬುದಾಗಿ ವರದಿಗಳಿವೆ. 

Saturday, October 5, 2024

ಕಟ್ಟಲೆಡೆಗೊಡುವ ದಾರಿಯೆನಗಿರಲಿ

 ಮತಪಂಥಗಳ ಮೂಲತತ್ವಗಳನ್ನು ಅರಿತು ಜೀವಿತದಲ್ಲಿ ಸನ್ಮಾರ್ಗಗಳನ್ನು ರೂಪಿಸಿಕೊಳ್ಳುವ ಸಾಧ್ಯತೆ ನಿಚ್ಚಳವಿದ್ದಾಗಲೂ ಅದರಲ್ಲಿರಬಹುದಾದ ಕುಂದುಕೊರತೆಗಳನ್ನು ನೀಗಿಸಿಕೊಳ್ಳಲಾಗದೆ ತೀವ್ರಗಾಮಿತ್ವಗಳನ್ನಳವಡಿಸಿಕೊಳ್ಳುವ ದಾರಿ ಕೆಡವಲೆಡೆಗೊಡುವ ದಾರಿ, ಅದು ಕಟ್ಟಲೆಡೆಗೊಡುವ ದಾರಿಯಾಗಿರದು.


ಮುಸ್ಲಿಂ ವಿಶ್ವಾಸಿಗಳ ಚರ್ಚ್

 ಸತ್ಯ ವೇದವನ್ನು ಓದಿ ಮಾನಸಾಂತರ ಹೊಂದಿದ‌; ಸತ್ಯ ವಿಶ್ವಾಸಿಗಳೆಂದು ತಮ್ಮನ್ನು ತಾವು ಕರೆದುಕೊಂಡು ಅಸತ್ಯ ವಿಶ್ವಾಸಿಗಳಾಗಿರುವ ಜನರನ್ನು ಸತ್ಯ ವೇದದ ಪಾರಾಯಣಗಳ ಮೂಲಕ ನೇರವಾಗಿ ಸ್ವರ್ಗಕ್ಕೆ ಪ್ರವೇಶ ದೊರಕಿಸಿಕೊಡುವ ಕಾರ್ಯಕ್ರಮಗಳನ್ನು ಹಾಗೆ ಕರೆಯಲಾಗುತ್ತದೆ. ‌



The Hidden Reality of Worship: Christianity, Islam, and the Indic Matrix

  Vigraha–Ārādhana and the Indic Civilizational Matrix Introduction Debates about “idol worship” have long been used in religious polemics i...