ಕಗ್ಗಮಾಲಿಕೆ - ೨: ನಂಬುಗೆ
ಕಗ್ಗ:
ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ |
ದೇವ ಸರ್ವೇಶ ಪರಬೊಮ್ಮನೆಂದು ಜನಂ ||
ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ |
ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ||
ವ್ಯಾಖ್ಯಾನ:
ಲೋಕದ ಹುಟ್ಟಿಗೆ ಕಾರಣಕರ್ತನೆಂದೂ, ಲೋಕದ ಮಾಯೆಯನ್ನು ಆಗಗೊಡುವವನೆಂದೂ, ದೇವರ ದೇವ ಪರಬ್ರಹ್ಮನೆಂದೂ, ಲಕ್ಷ್ಮೀ ಸಮೇತನಾದ ಮಹಾವಿಷ್ಣುವೆಂದೂ ಯಾವುದನ್ನು ತಾವು ಕಾಣದಿದ್ದರೂ ಜನರು ಶ್ರದ್ಧೆಯಿಂದ ನಂಬಿದ್ದಾರೋ ಆ ಪರಮಾದ್ಭುತ ಚೈತನ್ಯಕ್ಕೆ ಮೊದಲು ತಲೆಬಾಗು.
ತಾತ್ಪರ್ಯ:
ಲೋಕವನ್ನು ಸೃಷ್ಟಿಸಿದ ಚೈತನ್ಯವನ್ನು ಮೊದಲಿಗೆ ನಂಬಬೇಕು, ನಂಬಿ ತಲೆಬಾಗಬೇಕು ಎಂದು ಗುಂಡಪ್ಪನವರು ಈ ಕಗ್ಗದ ಮೂಲಕ ಸಾರಿದ್ದಾರೆ.
ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ನಿಧಾನಗತಿಯ ಅನುರಣನಗಳಲ್ಲಿ ಕಗ್ಗದ ಭಾವ ಗ್ರಾಹ್ಯವಾಗಬಲ್ಲುದು. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧ ಆಡಿಯೋ ವಿಡಿಯೋ ಇಲ್ಲಿದೆ.
#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻
No comments:
Post a Comment