Showing posts with label Vaishnava janatho. Show all posts
Showing posts with label Vaishnava janatho. Show all posts

Saturday, November 16, 2013

ವೈಷ್ಣವ ಬಂಧು

ವೈಷ್ಣವ ಬಂಧುವೆಂದವನನ್ನೇ ಕರೆವರು
ಪರರ ದುಃಖಗಳನ್ನರಿತವನ
ದುರ್ಬಲರಿಂಗುಪಕರಿಪವನವನು
ಮನದೊಳಭಿಮಾನವ ತಾಳದೆಯೆ

ಎಲ್ಲವರೊಡ ಸಹನೆಯಿಂದೇಗುತ್ತ
ಯಾರನ್ನೂ ತೆಗಳದೆ ಜೀವಿಸುವ
ನಡೆನುಡಿಯಿಂದ ಸಮಚಿತ್ತನವನು
ಆ ವೈಷ್ಣವನವ್ವೆಯೋ ಧನ್ಯೆಯಲ

ಸಮತೆಯ ಕಾಣುತ ದಾಹವ ತೊರೆಯುತ
ಪರಸ್ತ್ರೀಯರ ತಾಯೆಂದೆಣಿಸುವನು 
ನಾಲಗೆಯಿಂದಲಸತ್ಯವ ನುಡಿಯನು
ಪರಸ್ವತ್ತುಗಳನ್ನುಣದಿರುವವನು

ಮೋಹಮಾಯೆಯೊಳು ಮುಳುಗಿರದವನು
ದೃಢವೈರಾಗ್ಯವ ತಾಳ್ದವನು
ರಾಮನಾಮವೇ ಅಮೃತವವಂಗೆ
ಧಾಮಂಗಳೆಲ್ಲವ ಜಾನಿಸಿರೆ*

ದುರಾಶೆಯ ತಾಳನು ಕಪಟರಹಿತನು
ಕಾಮಕ್ರೋಧಂಗಳ ಗೆಲಿದವನು
ಕುಲವ ಉದ್ಧರಿಪವನವನನ್ನೇ ಕಾದಿಹೆ
ದೀನ ನರಸಯ್ಯ ನಾನು ದರುಶನಕೆ

ಮೂಲಸಾಹಿತ್ಯ - ನರಸಿಂಹ ಮೆಹತಾ, ವೈಷ್ಣವ ಜನತೋ ತೇನೇ ಕಹಿಯೇ.

*ಜಾನಿಸು = ಧ್ಯಾನಿಸು

ಇದರ ಹಳೆಯ ಆವೃತ್ತಿಯೊಂದನ್ನು ಕೆಳಗಣ ತಾಣದಲ್ಲಿ ಕೇಳಬಹುದು:

ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ

 ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...