Effective three language policy would be to assign one more language in addition to the existing state languages, e.g. Kannada could be assigned to Gujarat, Tamil to UP, Konkani to Maharashtra and so on. This could be an effective three language policy. Then nobody should feel the imposition of Hindi over regional languages. In fact, Hindi should not be imposed over the south. More prominence should be given to the regional languages of the North such as Punjabi and Bengali. At the end of the day, what one learns is the essence of Indic language Base.
Saturday, March 1, 2025
Thursday, December 12, 2024
ಸರಕಾರದಿಂದಾಗುವ ಅಪವ್ಯಯ
1000 ಕೆಜಿ ಗಂಧದ ಕಟ್ಟಿಗೆಗೆ 12000x1000 = 1,20,00,000 ಆಗುತ್ತದೆ. ಅಷ್ಟು ಕಟ್ಟಿಗೆಯನ್ನು ಅರಣ್ಯ ಇಲಾಖೆಯಿಂದ (ರಾಜ್ಯದ ಬೊಕ್ಕಸದಿಂದ) ಪೂರೈಸಿ ಅಂತ್ಯ ಸಂಸ್ಕಾರ ನೆರವೇರಿಸುವ ಬದಲಿಗೆ ಅಗಲಿದವರ ಹೆಸರಿನಲ್ಲಿ ಜನೋಪಯೋಗಿ ಯೋಜನೆಗಳಿಗೆ ವಿನಿಯೋಗಿಸಬಾರದೇಕೆ?
Sunday, November 24, 2024
ಅನ್ಯವನ್ನು ಒಳಗೊಳ್ಳುವ ಕಷ್ಟ
ನಂಬಿಕೆಯ ಬುಡಕ್ಕೆ ಕೈ ಹಾಕಿದರೆ ಪ್ರತಿಯೊಂದು ಮತಪಂಥದಲ್ಲಿ ಹುಳುಕುಗಳು ಸಿಕ್ಕಬಹುದು. ಎಕ್ಸ್-ಮುಸ್ಲಿಂ ಎಂಬ ಆ಼ಷಾಢಭೂತಿ ಸಮಯಸಾಧಕ ಇಸ್ಲಾಂ ಮತದ ಮೂಲಕ್ಕೆ ಕೈ ಹಾಕಿ ಯಾರಿಗೋ ನ್ಯಾಯ ಒದಗಿಸುತ್ತಾನೆ ಎನ್ನುವುದು ಭ್ರಮೆ. ಇವನು ತನ್ನ ಬೆಂಬಲಿಗರನ್ನೇ ಹೀಯಾಳಿಸುವ ಪೋಸ್ಟುಗಳು ಈ ಮೂರ್ಖನಿಂದ ಈ ಹಿಂದೆಯೇ ಬಂದಿವೆ. ಸೋಜಿಗದ ವಿಷಯ ಏನೆಂದರೆ ಸನಾತನ ಧರ್ಮಾವಲಂಬಿಗಳಾದವರು ಇವನ ಬೆಣ್ಣೆ ಮಾತುಗಳಿಗೆ ಬಲಿಯಾಗಿ ಇಸ್ಲಾಂ ಮತದ ದೂಷಣೆಗೆ ತೊಡಗುತ್ತಾರೆ. ಆದರೆ ಇವನು ತನ್ನ ಸಮಯ ನೋಡಿಕೊಂಡು ಸನಾತನ ಧರ್ಮದ ಅವಹೇಳನ ಮಾಡುವವನು. ಆಧುನಿಕ ಕಾಲದ ಪೊಲಿಟಿಕಲ್ ಇಸ್ಲಾಂ ಎಂಬ ಮತೀಯ ಭ್ರಾಂತಿಯನ್ನು ವಿರೋಧಿಸುವುದು ಬೇರೆ, ಇಸ್ಲಾಂ ಮತ ಎಂಬ ಮೂಲ ಸತ್ತ್ವವನ್ನು ವಿರೋಧಿಸುವುದು ಬೇರೆ. ಶಾಂತವಾಗಿ ಮುನ್ನಡೆಯುವ ಸಮಾಜದಲ್ಲಿ ಇನ್ನೊಬ್ಬನನ್ನು ವಿರೋಧಿಸುವುದು ಜೀವನದ ಮಾರ್ಗ ಆಗದಿರಲಿ. ಅನ್ಯವನ್ನು ಒಳಗೊಳ್ಳುವುದು ಕಷ್ಟದ ಕೆಲಸ, ಆದರೆ ಅದು ಅನಿವಾರ್ಯದ ಹಾದಿ.
Wednesday, October 30, 2024
ಸಂತ ಬದರುದ್ದಿನ್ - ಬದರಿನಾಥ
ಶಬರಿಮಲೆಯಲ್ಲಿ ವಾವರ ಸ್ವಾಮಿ ಇರುವಂತೆ ಬದರಿನಾಥದಲ್ಲಿ ಅದೇ ಸ್ಥಾನ ಸಂತ ಬದರುದ್ದಿನ್ ಅವರಿಗೆ ಇದೆ ಎಂದು ತಿಳಿಯಬಹುದು. ವಾವರ ಸ್ವಾಮಿ ನಿಜವಾಗಿ ಅಯ್ಯಪ್ಪನ ಭಕ್ತನಾಗಿದ್ದನೆಂಬುದು ಭಕ್ತರ ಅಂಬೋಣ. ಆದರೆ ಇಂದು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುವ ಪ್ರತಿಯೊಬ್ಬರು ವಾವರ ಸ್ವಾಮಿಯ ಭೇಟಿ ಮಾಡದಿದ್ದರೆ ಅಯ್ಯಪ್ಪನ ದರ್ಶನ ಸಂಪೂರ್ಣವಲ್ಲ ಎಂದು ತಿಳಿಯುತ್ತಾರೆ. ಭಕ್ತನಾಗಿದ್ದ ವಾವರ ಸ್ವಾಮಿಯ ಭೇಟಿ ಮಾಡಿ ಕಾಣಿಕೆ ಕೊಡುವುದರಲ್ಲಿ ತಪ್ಪಿಲ್ಲ. ಆದರೆ ಮುಸಲ್ಮಾನ ವಾವರನ ಭೇಟಿಗಾಗಿ ಕಾಣಿಕೆ ಕೊಡುವ ಅಥವಾ ಅಲ್ಲಿ ದೊರಕುವ ಭಸ್ಮ ಸ್ವೀಕರಿಸುವ ಅಗತ್ಯವಿಲ್ಲವೆಂದು ತೋರುತ್ತದೆ. ಭಸ್ಮಧಾರಿಯಾದ ಅಯ್ಯಪ್ಪ ಭಕ್ತನನ್ನು ಮುಸ್ಲಿಂ ಎಂದು ಪರಿಗಣಿಸುವ ಅಗತ್ಯವಿಲ್ಲ ಮತ್ತು ಈ ಬಗೆಯ ಕಾಣಿಕೆಗಳನ್ನು ಸ್ವೀಕರಿಸುವುದು ಅವರ ಆಚಾರದ ಪ್ರಕಾರ ಶಿರ್ಕ್ ಎನಿಸಿಕೊಳ್ಳುತ್ತದೆ. ಹೀಗಾಗಿ ನಿಜವಾಗಿ ಅವರ ಮತಾನುಸರಣೆಗೆ ಅದರ ಅಗತ್ಯವಿಲ್ಲ.
ಬದರಿನಾಥದಲ್ಲಿ ಇಂದಿಗೆ ಇರುವ ಅವಧಿ ಭಾಷೆಯ ಆರತಿ ಶ್ಲೋಕವನ್ನು ಬರೆದವರು ಸಂತ ಬದರುದ್ದಿನ್ ಎನ್ನಲಾಗುತ್ತದೆ. ಆದ ಸಂತ ಬದರುದ್ದಿನ್ ಎಂಬವರು ಭಸ್ಮಧಾರಿಯಾದ ಶಿವಭಕ್ತನೆಂದು ಅಲ್ಲಿಯೇ ಹೇಳಲಾಗುತ್ತದೆ. ಭಸ್ಮಧಾರಿಯಾದ ಶಿವಭಕ್ತನನ್ನು ಮುಸಲ್ಮಾನನನ್ನು ಮುಸ್ಲಿಂ ಎಂದು ಪರಿಗಣಿಸುವ ಅಗತ್ಯವಿಲ್ಲ. ಸಂತ ಬದರುದ್ದಿನ್ ಕಥೆಯಲ್ಲ, ನಿಜವಾಗಿ ಇದ್ದವರೆಂದು ಪರಿಗಣಿಸಿದರೂ ಶಿವಭಕ್ತನಾದ ಬದರುದ್ದಿನ್ ಅವರಿಗೆ ದರ್ಗಾ ಇರುವುದಿಲ್ಲ ಎಂದು ತಿಳಿಯಬೇಕು.
ಇನ್ನು ಸೂಫಿ ಬದರುದ್ದಿನ್ ದರ್ಗಾ (ಬಾಘ್ಪತ್) ಎನ್ನಲಾಗುವ ಪ್ರದೇಶವೂ ಸಹ ಆಕ್ರಮಣ ಮಾಡಿಕೊಂಡ ಸ್ಥಳವೆಂಬುದಾಗಿ ವರದಿಗಳಿವೆ.
Saturday, October 5, 2024
ಕಟ್ಟಲೆಡೆಗೊಡುವ ದಾರಿಯೆನಗಿರಲಿ
ಮತಪಂಥಗಳ ಮೂಲತತ್ವಗಳನ್ನು ಅರಿತು ಜೀವಿತದಲ್ಲಿ ಸನ್ಮಾರ್ಗಗಳನ್ನು ರೂಪಿಸಿಕೊಳ್ಳುವ ಸಾಧ್ಯತೆ ನಿಚ್ಚಳವಿದ್ದಾಗಲೂ ಅದರಲ್ಲಿರಬಹುದಾದ ಕುಂದುಕೊರತೆಗಳನ್ನು ನೀಗಿಸಿಕೊಳ್ಳಲಾಗದೆ ತೀವ್ರಗಾಮಿತ್ವಗಳನ್ನಳವಡಿಸಿಕೊಳ್ಳುವ ದಾರಿ ಕೆಡವಲೆಡೆಗೊಡುವ ದಾರಿ, ಅದು ಕಟ್ಟಲೆಡೆಗೊಡುವ ದಾರಿಯಾಗಿರದು.
ಮುಸ್ಲಿಂ ವಿಶ್ವಾಸಿಗಳ ಚರ್ಚ್
ಸತ್ಯ ವೇದವನ್ನು ಓದಿ ಮಾನಸಾಂತರ ಹೊಂದಿದ; ಸತ್ಯ ವಿಶ್ವಾಸಿಗಳೆಂದು ತಮ್ಮನ್ನು ತಾವು ಕರೆದುಕೊಂಡು ಅಸತ್ಯ ವಿಶ್ವಾಸಿಗಳಾಗಿರುವ ಜನರನ್ನು ಸತ್ಯ ವೇದದ ಪಾರಾಯಣಗಳ ಮೂಲಕ ನೇರವಾಗಿ ಸ್ವರ್ಗಕ್ಕೆ ಪ್ರವೇಶ ದೊರಕಿಸಿಕೊಡುವ ಕಾರ್ಯಕ್ರಮಗಳನ್ನು ಹಾಗೆ ಕರೆಯಲಾಗುತ್ತದೆ.
Saturday, August 17, 2024
ನಾದಬ್ರಹ್ಮ
ವ್ಯಕ್ತಗಳಲ್ಲಿ ಅವ್ಯಕ್ತವಾದ, ಜೀವಗಳಲ್ಲಿ ಜೀವವಾಗಿ ನೆಲೆಸಿರುವ ಪರಮ ಚೈತನ್ಯವನ್ನಾರಾಧಿಸಲಿಕ್ಕೆ ಒದಗಬಲ್ಲ ಉಪಾಸನೆಗಳಲ್ಲಿ ಪ್ರಮುಖವಾದ ನಾದೋಪಾಸನೆ ಮೋಕ್ಷ ಸಾಧನೆಗಿರುವ ಸಾಧನವೆನ್ನಲಾಗಿದೆ. ಭಾರತೀಯ ಪರಂಪರೆಯಲ್ಲಿ ನಾದವನ್ನು ದೈವತ್ವದ ಅಭಿವ್ಯಕ್ತಿಯೆಂದು ಗ್ರಹಿಸಲಾಗಿದೆ. ಶಾರ್ಙ್ಗದೇವನ ಸಂಗೀತರತ್ನಾಕರದಲ್ಲಿ “ಸಮಸ್ತ ಬ್ರಹ್ಮಾಂಡವನ್ನು ವ್ಯಾಪಿಸಿರುವ, ನಿತ್ಯವೂ ಆನಂದವನ್ನು ಕೊಡಬಲ್ಲ, ಜೀವಕಾರಕವಾದ ನಾದಬ್ರಹ್ಮವನ್ನು ಪೂಜಿಸುವುದಾಗಲಿ” ಎನ್ನಲಾಗಿದೆ. ಭವ್ಯವಾದ ಈ ಆಶಯವನ್ನು ವಾಗ್ಗೇಯಕಾರರಾದ ತ್ಯಾಗರಾಜ ಸ್ವಾಮಿಗಳು ಬಲವಾಗಿ ಪ್ರತಿಪಾದಿಸಿದರು. ತ್ಯಾಗರಾಜ ಸ್ವಾಮಿಗಳು “ರಾಗಸುಧಾರಸ ಪಾನಮು ಜೇಸಿ ರಾಜಿಲ್ಲವೇ ಓ ಮನಸಾ” ಎಂದು ಸಾರಿದ್ದಾರೆ. “ರಾಗವೆಂಬ ಅಮೃತವನ್ನು ಕುಡಿದು ಆನಂದಿಸು, ಯಾಕೆಂದರೆ ಇದು ಸಕಲ ಸಂಪದಗಳನ್ನೂ ಕೊಡಬಲ್ಲುದು. ಸದಾಶಿವ ಸ್ವರೂಪವಾದ ಓಂಕಾರವನ್ನು ತಿಳಿದವರು ಜೀವನ್ಮುಕ್ತರಾಗುತ್ತಾರೆ” ಎಂಬುದು ಈ ಕೃತಿಯ ಸಾರ. ಇಲ್ಲಿ ರಾಗವೆಂಬುದು ನಾದ ಮತ್ತು ನಾದಬ್ರಹ್ಮ ಎಂಬುದು ಸಂಗೀತ ರೂಪದ ಪರಬ್ರಹ್ಮವೇ ಆಗಿದೆ. ಇದು ವ್ಯಕ್ತಿಗಳಿಗೆ ಸಲ್ಲುವ ಅಭಿಧಾನವಲ್ಲ.
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...


