ನಂಬುವುದು ಆದಿಯೊಳು ಪರಮ ಚೇತನ ವಿಭುವ
ಲೋಕವನು ಸೃಷ್ಟಿಸಿದ ಪರದೈವವ
ತಾನು ತಾನಲ್ಲದಿಹ ತಾನೇ ತಾನಾಗಿರುವ
ತನಗೆ ಮಿಗಿಲಿಲ್ಲದಿಹ ಅಧಿದೈವವ
ಎಲ್ಲವನೂ ಒಳಗೊಂಡ ಎಲ್ಲದರ ಹಿಡಿವಡೆದ
ಎಲ್ಲದಕೂ ಮಿಗಿಲಾದ ಚೈತನ್ಯವ
ತಿರುತಿರುಗಿದಾ ಬುಗರಿ ತಿರುಗೆ ತಿರೆಗುರುಳಿದರೆ
ತಿರಿದುದನು ತೆರೆದೀವ ವೈಚಿತ್ರ್ಯವ
ಎಲ್ಲದಕೂ ಎತ್ತರದ ಆದಿಅಂತ್ಯಗಳಿರದ
ಎಲ್ಲರೊಳು ನೆಲೆಸಿರುವ ಆನಂದವ
ರೂಪಗಳ ಮೀರಿರುವ ರೂಪಿನೊಳೇ
ಮೈದೋರ್ವ ಕಾಲದೇಶಗಳಿರದ ಬ್ರಹ್ಮಾಂಡವ
ಬೇಡಿಕೊಳಲಿಂದಿಲ್ಲ ನೂರು ವರಗಳ ಕೃಪೆಯ
ಮೂರುಮೂರರೊಳು ಕಾಣ್ಗೆ ದಿಟದರಿವನು
Wednesday, October 17, 2012
Subscribe to:
Posts (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...