ಬಂದೇ ಬರುವುದದೊಂದು ದಿನ ಭೂಮಿಯೊಳು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
Thursday, January 16, 2014
ತೇಲುದೋಣಿ
ತೇಲುದೋಣಿಯ ತೆರದೆ ತೇಲುತೇಲುತ ಸಾಗಿ
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
Saturday, November 30, 2013
ಕಾಲವೇ ಚಲಿಸು ಹಿಂದಕ್ಕೆ
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಮೂಡಬಾಂದಳದೆ ತೇರನ್ನೇರಿದ ಆದಿತ್ಯದೇವನ ಸಂಗದೆ |
ಓಡೆ ಓಟವನ್ನು ಮಾಡೆ ಮಾಟವನ್ನು ಹೂಡೆ ಹೂಟವನ್ನು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಜವ್ವನವ ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮುಪ್ಪು ಬಾರದೊಲರಳಿಸು ||
ಕೞೆದುಹೋಗಿಹ ದಿನಗಳೆಲ್ಲದರ ಆನಂದವ ಕೊಡು ಹಿಂದಕ್ಕೆ |
ಕಾಣುತ್ತಿದ್ದರೂ ಕೈಗೆ ಎಟಕದ ಕನಸನ್ನೂ ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಪಡುವ ಬಾಂದಳದೆ ತೇಲುತ್ತಿಪ್ಪ ಆ ತುಂಬುತಿಂಗಳ ಚಂದದೆ |
ಸುರಿಯುತ್ತಿದ್ದರೂ ಮೆಯ್ಗೆ ಸೋಕದ ಬೆಳ್ವೊನಲನ್ನು ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಭೂತಕಾಲದ ಭವಿತನಿಧಿಗಳ ಕಳೆದುಹೋದ ಕೀಲಿಗೊಂಚಲನ್ನು |
ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ದಯೆಯಿರಲಿ ||
[soundcloud url="https://api.soundcloud.com/tracks/86460112" width="100%" height="166" iframe="true" /]
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಮೂಡಬಾಂದಳದೆ ತೇರನ್ನೇರಿದ ಆದಿತ್ಯದೇವನ ಸಂಗದೆ |
ಓಡೆ ಓಟವನ್ನು ಮಾಡೆ ಮಾಟವನ್ನು ಹೂಡೆ ಹೂಟವನ್ನು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಜವ್ವನವ ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮುಪ್ಪು ಬಾರದೊಲರಳಿಸು ||
ಕೞೆದುಹೋಗಿಹ ದಿನಗಳೆಲ್ಲದರ ಆನಂದವ ಕೊಡು ಹಿಂದಕ್ಕೆ |
ಕಾಣುತ್ತಿದ್ದರೂ ಕೈಗೆ ಎಟಕದ ಕನಸನ್ನೂ ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಪಡುವ ಬಾಂದಳದೆ ತೇಲುತ್ತಿಪ್ಪ ಆ ತುಂಬುತಿಂಗಳ ಚಂದದೆ |
ಸುರಿಯುತ್ತಿದ್ದರೂ ಮೆಯ್ಗೆ ಸೋಕದ ಬೆಳ್ವೊನಲನ್ನು ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಭೂತಕಾಲದ ಭವಿತನಿಧಿಗಳ ಕಳೆದುಹೋದ ಕೀಲಿಗೊಂಚಲನ್ನು |
ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ದಯೆಯಿರಲಿ ||
[soundcloud url="https://api.soundcloud.com/tracks/86460112" width="100%" height="166" iframe="true" /]
Saturday, November 16, 2013
ವೈಷ್ಣವ ಬಂಧು
ವೈಷ್ಣವ ಬಂಧುವೆಂದವನನ್ನೇ ಕರೆವರು
ಪರರ ದುಃಖಗಳನ್ನರಿತವನ
ದುರ್ಬಲರಿಂಗುಪಕರಿಪವನವನು
ಮನದೊಳಭಿಮಾನವ ತಾಳದೆಯೆ
ಎಲ್ಲವರೊಡ ಸಹನೆಯಿಂದೇಗುತ್ತ
ಯಾರನ್ನೂ ತೆಗಳದೆ ಜೀವಿಸುವ
ನಡೆನುಡಿಯಿಂದ ಸಮಚಿತ್ತನವನು
ಆ ವೈಷ್ಣವನವ್ವೆಯೋ ಧನ್ಯೆಯಲ
ಸಮತೆಯ ಕಾಣುತ ದಾಹವ ತೊರೆಯುತ
ಪರಸ್ತ್ರೀಯರ ತಾಯೆಂದೆಣಿಸುವನು
ನಾಲಗೆಯಿಂದಲಸತ್ಯವ ನುಡಿಯನು
ಪರಸ್ವತ್ತುಗಳನ್ನುಣದಿರುವವನು
ಮೋಹಮಾಯೆಯೊಳು ಮುಳುಗಿರದವನು
ದೃಢವೈರಾಗ್ಯವ ತಾಳ್ದವನು
ರಾಮನಾಮವೇ ಅಮೃತವವಂಗೆ
ಧಾಮಂಗಳೆಲ್ಲವ ಜಾನಿಸಿರೆ*
ದುರಾಶೆಯ ತಾಳನು ಕಪಟರಹಿತನು
ಕಾಮಕ್ರೋಧಂಗಳ ಗೆಲಿದವನು
ಕುಲವ ಉದ್ಧರಿಪವನವನನ್ನೇ ಕಾದಿಹೆ
ದೀನ ನರಸಯ್ಯ ನಾನು ದರುಶನಕೆ
ಮೂಲಸಾಹಿತ್ಯ - ನರಸಿಂಹ ಮೆಹತಾ, ವೈಷ್ಣವ ಜನತೋ ತೇನೇ ಕಹಿಯೇ.
*ಜಾನಿಸು = ಧ್ಯಾನಿಸು
ಇದರ ಹಳೆಯ ಆವೃತ್ತಿಯೊಂದನ್ನು ಕೆಳಗಣ ತಾಣದಲ್ಲಿ ಕೇಳಬಹುದು:
Monday, August 26, 2013
ಮಳೆ
ಮಳೆ
ಎಡೆಬಿಡದೆ ಸುರಿಯುವ ಮಳೆಗೆ
ಕೊಚ್ಚಿಹೋದುವು ಹಲವೂ
ಕೊಚ್ಚೆಯೊಳು ಅರಳೀತೇ ಕೆಂಪನೆಯ ತಾವರೆ
ಕೊನೆಯಿರದ ಸುರಿತದ ನಡುವೆ
ಕೊನೆಗಂಡಿತಂದು ಮಳೆಯೂ
ಇನ್ನೊಮ್ಮೆ ಬಾರದೇ ಆಷಾಢ ಮಾಸ
ಸುಡುವ ಬೇಗೆಯ ಬಿಸಿಗೆ
ಒಣಗಿ ಮರ-ಗಂಟಿಗಳು
ಇನ್ನೊಮ್ಮೆ ಕೊನರುವುದೇ ಕನಲಿರುವ ಕೊಂಬೆ
ತನ್ನದಿರೆ ತನ್ನದೆಂದೂ
ಅನ್ಯವಿರೆ ಪರವೆಂದೂ
ಅನ್ಯವನ್ನೊ ಳಗೊಂಡೀತೇ ಮುರುಟಿರುವ ಮಾನಸ
ಎಡೆಬಿಡದೆ ಸುರಿಯುವ ಮಳೆಗೆ
ಕೊಚ್ಚಿಹೋದುವು ಹಲವೂ
ಕೊಚ್ಚೆಯೊಳು ಅರಳೀತೇ ಕೆಂಪನೆಯ ತಾವರೆ
ಕೊನೆಯಿರದ ಸುರಿತದ ನಡುವೆ
ಕೊನೆಗಂಡಿತಂದು ಮಳೆಯೂ
ಇನ್ನೊಮ್ಮೆ ಬಾರದೇ ಆಷಾಢ ಮಾಸ
ಸುಡುವ ಬೇಗೆಯ ಬಿಸಿಗೆ
ಒಣಗಿ ಮರ-ಗಂಟಿಗಳು
ಇನ್ನೊಮ್ಮೆ ಕೊನರುವುದೇ ಕನಲಿರುವ ಕೊಂಬೆ
ತನ್ನದಿರೆ ತನ್ನದೆಂದೂ
ಅನ್ಯವಿರೆ ಪರವೆಂದೂ
ಅನ್ಯವನ್ನೊ ಳಗೊಂಡೀತೇ ಮುರುಟಿರುವ ಮಾನಸ
ವ್ರಣ
ವ್ರಣ
ನಿನ್ನನರಿತೆನು ಎಂದು
ತಿಳಿದಿದ್ದೆ ನಾನಂದು
ನಮ್ಮ ದೇಹಗಳ ನಾವರಿತುಕೊಂಡ ಹಾಗೆ
ಒಂದು ಸ್ಪರ್ಶದಲಿ ಒಂದಂಗ ಮಿಡಿವಂತೆ
ಇನ್ನೊಂದು ಸ್ಪರ್ಶದಲಿ ನೋವನೀವಂತೆ
ಎಲ್ಲಾ ತಿಳಿದಂತೆ ಭ್ರಮೆಗೊಂಡಿದ್ದೆ ನಾನು
ಭ್ರಮೆ ಕಳಚಿತೊಂದು ದಿನ
ತಿಳಿಯಲಾರದೆ ಹೋದೆ
ನನ್ನ ದೇಹವನೇ ನಾನರಿಯಲಿಲ್ಲ
ಮೇಲುಹರಿವಿನ ಮಂಜು
ನಿಜದಲ್ಲಿ ಹಿರಿದೆಂದು
ಮಂಜುಗುಡ್ಡೆಯ ಗಾತ್ರಾ ನಾನರಿಯಲಿಲ್ಲ
ಹೊರಗೆ ಕಾಣುವ ಪೊರೆಯ
ಒಳಗನರಿಯದೆ ಹೋದೆ
ಒಳಗೆ ಬೆಳೆದಿದ್ದ ವ್ರಣಾ ನಾನರಿಯಲಿಲ್ಲ
ಮಂಜುಗುಡ್ಡೆ = iceberg
ನಿನ್ನನರಿತೆನು ಎಂದು
ತಿಳಿದಿದ್ದೆ ನಾನಂದು
ನಮ್ಮ ದೇಹಗಳ ನಾವರಿತುಕೊಂಡ ಹಾಗೆ
ಒಂದು ಸ್ಪರ್ಶದಲಿ ಒಂದಂಗ ಮಿಡಿವಂತೆ
ಇನ್ನೊಂದು ಸ್ಪರ್ಶದಲಿ ನೋವನೀವಂತೆ
ಎಲ್ಲಾ ತಿಳಿದಂತೆ ಭ್ರಮೆಗೊಂಡಿದ್ದೆ ನಾನು
ಭ್ರಮೆ ಕಳಚಿತೊಂದು ದಿನ
ತಿಳಿಯಲಾರದೆ ಹೋದೆ
ನನ್ನ ದೇಹವನೇ ನಾನರಿಯಲಿಲ್ಲ
ಮೇಲುಹರಿವಿನ ಮಂಜು
ನಿಜದಲ್ಲಿ ಹಿರಿದೆಂದು
ಮಂಜುಗುಡ್ಡೆಯ ಗಾತ್ರಾ ನಾನರಿಯಲಿಲ್ಲ
ಹೊರಗೆ ಕಾಣುವ ಪೊರೆಯ
ಒಳಗನರಿಯದೆ ಹೋದೆ
ಒಳಗೆ ಬೆಳೆದಿದ್ದ ವ್ರಣಾ ನಾನರಿಯಲಿಲ್ಲ
ಮಂಜುಗುಡ್ಡೆ = iceberg
ಜೀವವಾಹ
ಜೀವವಾಹ
ಹಗಲಿರುಳು ಎಡೆಬಿಡದೆ
ನನ್ನೊಳಗೆ ನನ್ನಂತೆ
ಹರಿವ ಜೀವದ ವಾಹ ನೀನಲ್ಲವೇ
ಮಣ್ಣ ಕಣ-ಕಣದಿಂದ
ಸ್ಫುರಣಗೊಳೆ ಭವವಾಗಿ
ಅರಳ್ವ ಜೀವದ ವಾಹ ನೀನಲ್ಲವೇ
ಅಳವಿರದಾ ಕಾಶದಿಂದ
ಹರಿವ ಬಲ್ಝರಿಯಂತೆ
ಸುರಿವ ಜೀವದ ವಾಹ ನೀನಲ್ಲವೇ
ಕಡಲಿನಾಳದ ಬಸಿರ
ರತ್ನಗರ್ಭವ ಸೀಳಿ
ಹುಟ್ಟನೀಯುವ ವಾಹ ನೀನಲ್ಲವೇ
ಚಣಚಣವೂ ಉಸಿರಾಗಿ
ಹರಿದು ಒಳಹೊಳೆಯಾಗಿ
ನೆತ್ತರೊಡಲಿನ ವಾಹ ನೀನಲ್ಲವೇ
ಹಗಲಿರುಳು ಎಡೆಬಿಡದೆ
ನನ್ನೊಳಗೆ ನನ್ನಂತೆ
ಹರಿವ ಜೀವದ ವಾಹ ನೀನಲ್ಲವೇ
ಮಣ್ಣ ಕಣ-ಕಣದಿಂದ
ಸ್ಫುರಣಗೊಳೆ ಭವವಾಗಿ
ಅರಳ್ವ ಜೀವದ ವಾಹ ನೀನಲ್ಲವೇ
ಅಳವಿರದಾ ಕಾಶದಿಂದ
ಹರಿವ ಬಲ್ಝರಿಯಂತೆ
ಸುರಿವ ಜೀವದ ವಾಹ ನೀನಲ್ಲವೇ
ಕಡಲಿನಾಳದ ಬಸಿರ
ರತ್ನಗರ್ಭವ ಸೀಳಿ
ಹುಟ್ಟನೀಯುವ ವಾಹ ನೀನಲ್ಲವೇ
ಚಣಚಣವೂ ಉಸಿರಾಗಿ
ಹರಿದು ಒಳಹೊಳೆಯಾಗಿ
ನೆತ್ತರೊಡಲಿನ ವಾಹ ನೀನಲ್ಲವೇ
Subscribe to:
Posts (Atom)
ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ
ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ ಪೀಠಿಕೆ: ಚಿಟಿಕೆ ಹೊಡೆಯಲು ಎರಡು ಬೆರಳುಗಳು ಬೇಕಾಗುವಂತೆ, ಲೋಕದ ವ್ಯವಹಾರದಲ್ಲಿ ದ್ವೈತವೇ ಇರುತ್ತದೆ. ಆದರೆ ಪರಮತತ್ತ್ವ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...
-
Appeasement and the Mirage of Harmony: Lessons from History Across Indian history, well-intentioned efforts to create harmony through com...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...