ಎಣೆಯಿಲ್ಲದ ಚೆಲುವೆ,
ನನ್ನ ಮನವನು ಕದ್ದ ಕೋಮಲೆ ಅವಳು;
ಎಣೆಯಿಲ್ಲದ ಚೆಲುವೆ.
ಹುಬ್ಬಿಗೆ ಕಾಡಿಗೆ ಪೂಸದೆ ಇದ್ದರೂ
ಕಣ್ಣಲ್ಲೆ ನುಡಿವವಳು;
ತನ್ನ ಕಣ್ಣಲ್ಲೆ ನುಡಿವವಳು
ನಾಲಗೆ ನುಡಿಯದ ಮಾತುಗಳೆಲ್ಲವ
ತನ್ನ ಕಣ್ಣಲ್ಲೆ ನುಡಿವವಳು
ನನ್ನ ಮನವನು ಕದ್ದ ಕೋಮಲೆ ಅವಳು;
ಎಣೆಯಿಲ್ಲದ ಚೆಲುವೆ.
ಮೈಹೊಳಪಿನ ಕಾಂತಿಯೆ ಇಲ್ಲದೆ ಹೋದರೂ
ಬಂಗಾರದಂಥವಳು;
ಮನದೆ ಬಂಗಾರದಂಥವಳು
ಮೈಬಣ್ಣದ ಭ್ರಾಂತಿಗೆ ಸೋಲದೆ ಇದ್ದರೂ ಬಂಗಾರದಂಥವಳು;
ಮನದೆ ಬಂಗಾರದಂಥವಳು
ನನ್ನ ಮನವನು ಕದ್ದ ಕೋಮಲೆ ಅವಳು;
ಎಣೆಯಿಲ್ಲದ ಚೆಲುವೆ.
ಮಾತುಗಳಾಡುತ ಮೈಯ ಮರೆವವಳಲ್ಲ
ಮಾತನ್ನು ಅರಿತವಳು;
ಮಾತಿನ ಹಿತವನ್ನು ಅರಿತವಳು
ಮಿತಿಗಳನರಿಯದೆ ಆಡದೆ ಇದ್ದರೂ
ಹಿತವನ್ನು ಅರಿತವಳು;
ಮಾತಿನ ಹಿತವನ್ನು ಅರಿತವಳು
ನನ್ನ ಮನವನು ಕದ್ದ ಕೋಮಲೆ ಅವಳು;
ಎಣೆಯಿಲ್ಲದ ಚೆಲುವೆ.
ನಾ ನುಡಿಯದೆ ಇದ್ದರೂ ಮನಸ್ಸಿನ ಮಾತನು
ತಾನಾಗಿ ಅರಿವವಳು
ತಾನಾಡದೆ ಒಂದನೂ ಉಳಿಸದೆ ಇದ್ದರೂ ತಾನಾಗಿ ಅರಿವವಳು;
ಎಲ್ಲವ ತಾನಾಗಿ ಅರಿವವಳು
ನನ್ನ ಮನವನು ಕದ್ದ ಕೋಮಲೆ ಅವಳು;
ಎಣೆಯಿಲ್ಲದ ಚೆಲುವೆ.
Wednesday, September 18, 2019
Wednesday, February 19, 2014
ಅನುಭವ
ಅನುಭವ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
ಜನಿಮರಣಂಗಳಲ್ಲೂ ಇಹಪರಂಗಳಲ್ಲೂ (೨)
ಬಿಡದಲೆ ಕಾಯುತ್ತ ದಾರಿಗಾಣಿಸಿದೆ
ಹೊಸತನು ಅರಿತಾಗ ಹಳತನು ತೊರೆದಾಗ
ಅಪರವೆಂಬುದು ಕಾಣೆ ನಿನ್ನ ಸೃಷ್ಟಿಯೊಳಗೆ
ನಿನ್ನನು ಅರಿತಾಗ ಮುಚ್ಚಿದ್ದು ತೆರೆದಾಗ
ನೀನೇ ನೀನಿದ್ದುದ ಕಂಡೆ ನಿನ್ನ ಸೃಷ್ಟುಯೊಳಾಗೆ
ಬರಿದೊಂದು ಸ್ಪರ್ಶದ ಮೋಹಕ ಮಾಯೆಯಲಿ
ಅರಿಯದ ತೀರದೊಳು ಎನ್ನ ತಂದು ಕೂರಿಸಿದೆ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
ಜನಿಮರಣಂಗಳಲ್ಲೂ ಇಹಪರಂಗಳಲ್ಲೂ (೨)
ಬಿಡದಲೆ ಕಾಯುತ್ತ ದಾರಿಗಾಣಿಸಿದೆ
ಹೊಸತನು ಅರಿತಾಗ ಹಳತನು ತೊರೆದಾಗ
ಅಪರವೆಂಬುದು ಕಾಣೆ ನಿನ್ನ ಸೃಷ್ಟಿಯೊಳಗೆ
ನಿನ್ನನು ಅರಿತಾಗ ಮುಚ್ಚಿದ್ದು ತೆರೆದಾಗ
ನೀನೇ ನೀನಿದ್ದುದ ಕಂಡೆ ನಿನ್ನ ಸೃಷ್ಟುಯೊಳಾಗೆ
ಬರಿದೊಂದು ಸ್ಪರ್ಶದ ಮೋಹಕ ಮಾಯೆಯಲಿ
ಅರಿಯದ ತೀರದೊಳು ಎನ್ನ ತಂದು ಕೂರಿಸಿದೆ
ದೂರ ದೂರದೊಳು ಅಲೆದಲೆಯುತಲಿದ್ದ ಜೀವಗಳೆರಡನ್ನು ಒಂದುಗೂಡಿಸಿದೆ
ಅರಿಯದ ಬಾಂಧವ್ಯಗಳನೊಟ್ಟುಗೂಡಿಸುತ್ತ ಅರಿಯದ ತಾಣದೊಳು ಎನ್ನ ತಂದು ಕೂರಿಸಿದೆ
Thursday, January 16, 2014
ಬಂದೇ ಬರುವುದು
ಬಂದೇ ಬರುವುದದೊಂದು ದಿನ ಭೂಮಿಯೊಳು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಜೀವಮೌನದ ಭಾವ ಸಾಂದ್ರತೆಯನಡರ್ದು
ಕಣ್ಣ ಪಟಲದ ಮುಂದೆ ಬಿರಿದು ನಕ್ಷತ್ರಗಳು
ಉದಯದೊಳು ಮಗುದೊಮ್ಮೆ ದಿನಚರಿಯ ಬಿಡದೆ
ಕಡಲ ತೀರದೊಳು ಬಡಿ-ಬೀಸುತಲೆಗಳು
ನೋವಿನೊಳೂ ನಲಿವಿನೊಳೂ ಭೇದಗಳನ್ನೆಣಿಸದೆಯೆ
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ಅಪರೂಪದಾ ತಾಣ ಅಪರೂಪದಾ ಜೀವ
ಅಂತರಾತ್ಮದ ಭಾವ ನಿಜದಿ ಬಯಸಿದುದನ್ನುಳಿದು
ಉಳಿದೇ ಉಳಿವುದದೊಂದು ನಿಜ ಭವದೊಳಗೆ
ಅಂತರಾತ್ಮದ ಭಾವ ಆವರಿಸಿದುದನ್ನುಳಿದು
ತೇಲುದೋಣಿ
ತೇಲುದೋಣಿಯ ತೆರದೆ ತೇಲುತೇಲುತ ಸಾಗಿ
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
ಕೊನೆಗಳನ್ನರಿಯದಲೆ ತೊಳತೊಳಲಿ ಪರಿತಪಿಸಿ
ಹಗರಣದ ರಗಳೆಯದಾವುದೊಂದನ್ನರಿಯದಿರೆ ||
ತೀರವಿಲ್ಲದ ಕಡಲ ನಡುನಡುವೆ ಮೌನದಲಿ
ಮಂದಹಾಸದ ಗಾನ ಗುನುಗುನುಗುತ್ತಿರುವಾಗ
ಕೇಳಬಯಸಿದೆ ಪದವ ಮೀರಿದ ಮಧು ಮಧುರತಮ ಗಾನ ||
ಕಾಲ ಬಾರದದೇಕೋ ಕಾರ್ಯ ತೀರದದಿನ್ನೇಕೋ
ಸಂಜೆಯಾಗಸ ಕೆಂಪು ಕೆಂಪನೆ ಮಸೆವಾಗ
ಮಸುಮಸುಕಿನಾ ಬೆಳಕು ಮೋಡದಲಿ ಮರೆಗೊಳಲು
ತೇಲ್ವ ದೋಣಿಯ ಹುಟ್ಟದಲುಗಾಡದಿರದೇ ||
Saturday, November 30, 2013
ಕಾಲವೇ ಚಲಿಸು ಹಿಂದಕ್ಕೆ
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಮೂಡಬಾಂದಳದೆ ತೇರನ್ನೇರಿದ ಆದಿತ್ಯದೇವನ ಸಂಗದೆ |
ಓಡೆ ಓಟವನ್ನು ಮಾಡೆ ಮಾಟವನ್ನು ಹೂಡೆ ಹೂಟವನ್ನು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಜವ್ವನವ ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮುಪ್ಪು ಬಾರದೊಲರಳಿಸು ||
ಕೞೆದುಹೋಗಿಹ ದಿನಗಳೆಲ್ಲದರ ಆನಂದವ ಕೊಡು ಹಿಂದಕ್ಕೆ |
ಕಾಣುತ್ತಿದ್ದರೂ ಕೈಗೆ ಎಟಕದ ಕನಸನ್ನೂ ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಪಡುವ ಬಾಂದಳದೆ ತೇಲುತ್ತಿಪ್ಪ ಆ ತುಂಬುತಿಂಗಳ ಚಂದದೆ |
ಸುರಿಯುತ್ತಿದ್ದರೂ ಮೆಯ್ಗೆ ಸೋಕದ ಬೆಳ್ವೊನಲನ್ನು ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಭೂತಕಾಲದ ಭವಿತನಿಧಿಗಳ ಕಳೆದುಹೋದ ಕೀಲಿಗೊಂಚಲನ್ನು |
ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ದಯೆಯಿರಲಿ ||
[soundcloud url="https://api.soundcloud.com/tracks/86460112" width="100%" height="166" iframe="true" /]
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಮೂಡಬಾಂದಳದೆ ತೇರನ್ನೇರಿದ ಆದಿತ್ಯದೇವನ ಸಂಗದೆ |
ಓಡೆ ಓಟವನ್ನು ಮಾಡೆ ಮಾಟವನ್ನು ಹೂಡೆ ಹೂಟವನ್ನು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಜವ್ವನವ ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮುಪ್ಪು ಬಾರದೊಲರಳಿಸು ||
ಕೞೆದುಹೋಗಿಹ ದಿನಗಳೆಲ್ಲದರ ಆನಂದವ ಕೊಡು ಹಿಂದಕ್ಕೆ |
ಕಾಣುತ್ತಿದ್ದರೂ ಕೈಗೆ ಎಟಕದ ಕನಸನ್ನೂ ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಪಡುವ ಬಾಂದಳದೆ ತೇಲುತ್ತಿಪ್ಪ ಆ ತುಂಬುತಿಂಗಳ ಚಂದದೆ |
ಸುರಿಯುತ್ತಿದ್ದರೂ ಮೆಯ್ಗೆ ಸೋಕದ ಬೆಳ್ವೊನಲನ್ನು ಕೊಡು | ಬಿಡುವಿರದೆ ||
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಭೂತಕಾಲದ ಭವಿತನಿಧಿಗಳ ಕಳೆದುಹೋದ ಕೀಲಿಗೊಂಚಲನ್ನು |
ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ದಯೆಯಿರಲಿ ||
[soundcloud url="https://api.soundcloud.com/tracks/86460112" width="100%" height="166" iframe="true" /]
Saturday, November 16, 2013
ವೈಷ್ಣವ ಬಂಧು
ವೈಷ್ಣವ ಬಂಧುವೆಂದವನನ್ನೇ ಕರೆವರು
ಪರರ ದುಃಖಗಳನ್ನರಿತವನ
ದುರ್ಬಲರಿಂಗುಪಕರಿಪವನವನು
ಮನದೊಳಭಿಮಾನವ ತಾಳದೆಯೆ
ಎಲ್ಲವರೊಡ ಸಹನೆಯಿಂದೇಗುತ್ತ
ಯಾರನ್ನೂ ತೆಗಳದೆ ಜೀವಿಸುವ
ನಡೆನುಡಿಯಿಂದ ಸಮಚಿತ್ತನವನು
ಆ ವೈಷ್ಣವನವ್ವೆಯೋ ಧನ್ಯೆಯಲ
ಸಮತೆಯ ಕಾಣುತ ದಾಹವ ತೊರೆಯುತ
ಪರಸ್ತ್ರೀಯರ ತಾಯೆಂದೆಣಿಸುವನು
ನಾಲಗೆಯಿಂದಲಸತ್ಯವ ನುಡಿಯನು
ಪರಸ್ವತ್ತುಗಳನ್ನುಣದಿರುವವನು
ಮೋಹಮಾಯೆಯೊಳು ಮುಳುಗಿರದವನು
ದೃಢವೈರಾಗ್ಯವ ತಾಳ್ದವನು
ರಾಮನಾಮವೇ ಅಮೃತವವಂಗೆ
ಧಾಮಂಗಳೆಲ್ಲವ ಜಾನಿಸಿರೆ*
ದುರಾಶೆಯ ತಾಳನು ಕಪಟರಹಿತನು
ಕಾಮಕ್ರೋಧಂಗಳ ಗೆಲಿದವನು
ಕುಲವ ಉದ್ಧರಿಪವನವನನ್ನೇ ಕಾದಿಹೆ
ದೀನ ನರಸಯ್ಯ ನಾನು ದರುಶನಕೆ
ಮೂಲಸಾಹಿತ್ಯ - ನರಸಿಂಹ ಮೆಹತಾ, ವೈಷ್ಣವ ಜನತೋ ತೇನೇ ಕಹಿಯೇ.
*ಜಾನಿಸು = ಧ್ಯಾನಿಸು
ಇದರ ಹಳೆಯ ಆವೃತ್ತಿಯೊಂದನ್ನು ಕೆಳಗಣ ತಾಣದಲ್ಲಿ ಕೇಳಬಹುದು:
Monday, August 26, 2013
ಮಳೆ
ಮಳೆ
ಎಡೆಬಿಡದೆ ಸುರಿಯುವ ಮಳೆಗೆ
ಕೊಚ್ಚಿಹೋದುವು ಹಲವೂ
ಕೊಚ್ಚೆಯೊಳು ಅರಳೀತೇ ಕೆಂಪನೆಯ ತಾವರೆ
ಕೊನೆಯಿರದ ಸುರಿತದ ನಡುವೆ
ಕೊನೆಗಂಡಿತಂದು ಮಳೆಯೂ
ಇನ್ನೊಮ್ಮೆ ಬಾರದೇ ಆಷಾಢ ಮಾಸ
ಸುಡುವ ಬೇಗೆಯ ಬಿಸಿಗೆ
ಒಣಗಿ ಮರ-ಗಂಟಿಗಳು
ಇನ್ನೊಮ್ಮೆ ಕೊನರುವುದೇ ಕನಲಿರುವ ಕೊಂಬೆ
ತನ್ನದಿರೆ ತನ್ನದೆಂದೂ
ಅನ್ಯವಿರೆ ಪರವೆಂದೂ
ಅನ್ಯವನ್ನೊ ಳಗೊಂಡೀತೇ ಮುರುಟಿರುವ ಮಾನಸ
ಎಡೆಬಿಡದೆ ಸುರಿಯುವ ಮಳೆಗೆ
ಕೊಚ್ಚಿಹೋದುವು ಹಲವೂ
ಕೊಚ್ಚೆಯೊಳು ಅರಳೀತೇ ಕೆಂಪನೆಯ ತಾವರೆ
ಕೊನೆಯಿರದ ಸುರಿತದ ನಡುವೆ
ಕೊನೆಗಂಡಿತಂದು ಮಳೆಯೂ
ಇನ್ನೊಮ್ಮೆ ಬಾರದೇ ಆಷಾಢ ಮಾಸ
ಸುಡುವ ಬೇಗೆಯ ಬಿಸಿಗೆ
ಒಣಗಿ ಮರ-ಗಂಟಿಗಳು
ಇನ್ನೊಮ್ಮೆ ಕೊನರುವುದೇ ಕನಲಿರುವ ಕೊಂಬೆ
ತನ್ನದಿರೆ ತನ್ನದೆಂದೂ
ಅನ್ಯವಿರೆ ಪರವೆಂದೂ
ಅನ್ಯವನ್ನೊ ಳಗೊಂಡೀತೇ ಮುರುಟಿರುವ ಮಾನಸ
Subscribe to:
Posts (Atom)
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ
ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ ಪೀಠಿಕೆ: ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳ...
-
ಕಾಸರಗೋಡು ತುಳುನಾಡಿನ ಭಾಗ - ಪಾದೂರು ಗುರುರಾಜ ಭಟ್ಟರು ತುಳುನಾಡಿನ ಬಗೆಗಿನ "ತುಳುನಾಡು" ಅಧ್ಯಯನ ಗ್ರಂಥದಲ್ಲಿ ಪಾದೂರು ಗುರುರಾಜ ಭಟ್ಟರು ಹೀಗೆ ಹೇಳುತ್ತಾ...
-
ಅನ್ಯದೇವತಾರಾಧನೆಗಳನ್ನು ಒಳಗೊಂಡ ಸಾರ್ವಜನಿಕ ಆಚರಣೆಗಳನ್ನು ಬಹುತೇಕ ಮುಸಲ್ಮಾನರು ಸಾರಾಸಗಟಾಗಿ ನಿರಾಕರಿಸುತ್ತಾರೆ ಎನ್ನುವುದು ತಪ್ಪು. ಇದು ವಾಸ್ತವಕ್ಕೆ ದೂರವಾದ ಅಂಶ. ಮ...
-
ಯು.ಆರ್. ಅನಂತಮೂರ್ತಿ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಯು.ಆರ್. ಅನಂತಮೂರ್ತಿಯವರ ಆತ್ಮಕಥೆ 'ಸುರಗಿ'ಯಲ್ಲಿ ದಾಖಲಾಗಿರುವ ೨೫ ಆಗಸ್ಟ್ ೨೦೦೮ರ ದಿ...